7:53 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಪದ್ಮಶ್ರೀ ಭಟ್ ಅಭಿನಂದನಾ ಕಾರ್ಯಕ್ರಮ: ಬಹುಮುಖ ಪ್ರತಿಭೆಯ ಬಾಲ ಕಲಾವಿದರಿಗೆ ಸನ್ಮಾನ

01/10/2021, 15:16

ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆ ವತಿಯಿಂದ ವಾಯ್ಸ್ ಆಫ್ ಆರಾಧನಾ ಬಹುಮುಖ ಪ್ರತಿಭೆ ಗಳಿಗೆ ಸಂಚಾಲಕಿ  ಪದ್ಮಶ್ರೀ ಭಟ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸನ್ಮಾನ ಕಾರ್ಯಕ್ರಮ ಸುರತ್ಕಲ್ ನ ಮಾಧವ ನಗರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ. ಅವರು ಬಹುಮುಖ ಪ್ರತಿಭೆಗಳನ್ನು ಸನ್ಮಾನಿಸಿದರು.

ಸಮಾಜ ಸೇವೆಯ ಜತೆಗೆ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವ ಆರದಿರಲಿ ಬದುಕು ಆರಾಧನಾ ತಂಡವನ್ನು ಶ್ಲಾಘಿಸಿದರು. ಬಹುಮುಖ ಪ್ರತಿಭೆಗಳಾದ ರುದ್ರಮನ್ಯು ಪೊನ್ನಗಿರಿ, ಶಿವಮನ್ಯು ಪೊನ್ನಗಿರಿ, ಧ್ಯಾನ್ ಮಂಗಳೂರು,ಅಭಿಷ್ಣಾ ಮಂಗಳೂರು, ತಪಸ್ಯಾ ಕಟೀಲು, ಶಾರ್ವಿ ಮಂಗಳೂರು, ಪೂರ್ವಿ ಕಟೀಲು, ಸಾನ್ವಿ ಮಂಗಳೂರು, ರಚನ್ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು.

ಪದ್ಮಶ್ರೀ ಭಟ್ ಹಾಗೂ ವಿವೇಕ್ ಪ್ರಭು ಅವರ ಹುಟ್ಟುಹಬ್ಬ ಆಚರಿಸಲಾಯಿತು. ಕೃಷ್ಣ ವೇಷ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು. ವಾಯ್ಸ್ ಆಫ್ ಆರಾಧನ ತಂಡದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ, ಆರಾಧನಾ ಭಟ್,  ದೇವಿಪ್ರಸಾದ್ ಶೆಟ್ಟಿ, ಪ್ರಸಾದ್ ಉಡುಪಿ. ವಿವೇಕ್ ಪ್ರಭು ನಿಡ್ಡೋಡಿ ರಾಕೇಶ್ ಪೊಳಲಿ, ಪದ್ಮಶ್ರೀ ಭಟ್ ನಿಡ್ಡೋಡಿ,ಆಮಂತ್ರಣ  ಪರಿವಾರದ ವಿಜಯ ಕುಮಾರ್ ಜೈನ್,ಸ್ನೇಹಲತಾ ಪೊನ್ನಗಿರಿ, ಶ್ರೀಕಾಂತ್ ಭಟ್ ಪೊನ್ನ ಗಿರಿ, ಬಾಬು ಮಂಗಳೂರು,ದಿನೇಶ್  ಕಟೀಲು, ಸುಕುಮಾರ್  ಹಾಗೂ ಆರದಿರಲಿ ಬದುಕು ಆರಾಧನಾ ಹಾಗೂ ವಾಯ್ಸ್ ಆಫ್ ಆರಾಧನಾ ಪೋಷಕರು ಉಪಸ್ಥಿತಿ ತರಿದ್ದರು. ಮಜಾಭಾರತ ಖ್ಯಾತಿಯ ಆರಾಧನಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು