7:41 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ವೆನ್ಲಾಕ್  ಆಯುಷ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ವಿಶೇಷ ಸೇವೆ

01/10/2021, 15:39

ಮಂಗಳೂರು(reporterkarnataka.com): ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ನಗರದ ವೆನ್ಲಾಕ್ ಆವರಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಆಯುಷ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರ ಆರೋಗ್ಯ ತಪಾಸಣೆ , ಆರೋಗ್ಯ ಪೂರ್ಣ ಜೀವನಕ್ಕೆ ಅಗತ್ಯವಾದ ಉಪಯುಕ್ತ ಸಲಹೆ ಹಾಗೂ ಆಯುಷ್ ಕಿಟ್ ಗಳ ವಿತರಣೆ ನೆರವೇರಿಸಲಾಯಿತು.


ಹಿರಿಯ ವೈದ್ಯರಾದ ಡಾ.ದೇವದಾಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅವರು ವೆನ್ಲಾಕ್ ಆವರಣದಲ್ಲಿ ಆಯುಷ್ ನ  ವಿವಿಧ ಚಿಕಿತ್ಸಾ ಸೌಲಭ್ಯಗಳ ಮೂಲಕ ಸಾರ್ವಜನಿಕ ಆರೋಗ್ಯ ಸೇವೆ ಮಾಡುತ್ತಿರುವ ಆಯುಷ್ ಇಲಾಖೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್ ಇಕ್ಬಾಲ್ ಅವರು ಡಾ.ದೇವದಾಸ್ ಅವರನ್ನು ಸನ್ಮಾನಿಸಿದರು. ಆಯುಷ್ ಆರೋಗ್ಯ ರಕ್ಷಣೆಗಾಗಿ ಉಪಯುಕ್ತವಾಗುವ ಆಯುಷ್ ಕಿಟ್ ಗಳನ್ನು ಹಿರಿಯ ನಾಗರಿಕರಿಗೆ ವಿತರಣೆ ಮಾಡಿದರು. ಅವರು ಮಾತನಾಡಿ ಸಾರ್ವಜನಿಕರ ಬಹಳ ವರ್ಷಗಳ ಬೇಡಿಕೆಯಾಗಿರುವ ಆಯುಷ್ ವೈದ್ಯ ಪದ್ಧತಿಗಳ ಸ್ವಾಸ್ಥ್ಯ ಕೇಂದ್ರವಾಗಿ ಉದ್ಘಾಟನೆಗೊಂಡು ಸೇವೆ ಪ್ರಾರಂಭಗೊಂಡಿರುತ್ತದೆ. ಇಲ್ಲಿ ಆಯುಷ್ – ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ಯುನಾನಿ ,ಹೋಮಿಯೋಪತಿ ಪದ್ಧತಿಗಳ ಸ್ಪೆಶಾಲಿಟಿ ಸೇವೆಗಳನ್ನು ನೀಡಲಾಗುತ್ತಿದೆ. ಅಲ್ಲದೆ ವೆನ್ಲಾಕ್ ಆವರಣದಲ್ಲಿ ಇರುವುದರಿಂದ ಎಲ್ಲಾ ಸೇವೆಗಳನ್ನು ಒಂದೇ ಸ್ಥಳದಲ್ಲಿ ಪಡೆಯಬಹುದಾಗಿದೆ.


ಅಷ್ಟಾಂಗ ಚಿಕಿತ್ಸಾ ವಿಶೇಷತೆಗಳು ಇಲ್ಲಿ ಲಭ್ಯವಿದ್ದು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುತ್ತದೆ.

ಆಯುಷ್ ಖಾಸಗಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಈ ಆಸ್ಪತ್ರೆಯಲ್ಲಿ ತಮ್ಮ ಸ್ಪೆಶಾಲಿಟಿ  ಸೇವೆಗಳನ್ನು ನೀಡಲಿವೆ. ಸಾರ್ವಜನಿಕರಿಗೆ ಇದರ ಪ್ರಯೋಜನ ತಲುಪುವಂತೆ ಮಾಡುವ ಈ ಪ್ರಯತ್ನಕ್ಕೆ ಸರ್ವರ ಸಹಕಾರ ಕೋರಿದರು.

ಡಾ.ಶೋಭಾರಾಣಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಡಾ.ಸಯ್ಯದ್ ಝಾಹಿದ್ ಹುಸೇನ್, ಹಿರಿಯ ಯುನಾನಿ ವೈದ್ಯರು ,ಡಾ.ಸಹನಾ ಪಾಂಡುರಂಗ, ತಜ್ಞ ಆಯುಷ್ ‌ವೈದ್ಯರುಗಳಾದ ಡಾ.ಬಸವರಾಜ್, ಡಾ.ವಿವೇಕ್ ಹೆಚ್. ವಸಂತ್, ಶ್ರೂಷಾಧಿಕಾರಿಗಳಾದ ಸುನಂದ ಡಿ.ಆರ್ , ಕವಿತಾ ಮತ್ತಿತರರು ಉಪಸ್ಥಿತರಿದ್ದರು.


ಹಿರಿಯ ನಾಗರಿಕರು ಈ ಕಾರ್ಯಕ್ರಮದ ಪ್ರಯೋಜನ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು