12:13 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಕಬ್ಬಿನ ಗದ್ದೆಯಲ್ಲಿ ಸುಟ್ಟ ಗಾಯದಿಂದ ಪತ್ತೆಯಾಗಿದ್ದ ಹೆಣ್ಣು ಮಗು: ಪಾಪಿ ಹೆತ್ತವರು ಪತ್ತೆಯಾಗುವ ಮುನ್ನವೇ ಸಾವು

01/10/2021, 20:39

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕಬ್ಬಿನ ತೋಟದಲ್ಲಿ ಪ್ರಜ್ಞಾಹೀನಾವಸ್ಥೆಯಲ್ಲಿ ಪತ್ತೆಯಾಗಿದ್ದ 2 ವರ್ಷದ ಹೆಣ್ಣು ಮಗು ಪೋಷಕರನ್ನು ಪತ್ತೆ ಹಚ್ಚುವ ಮುನ್ನವೇ ಸಾವನ್ನಪ್ಪಿದ ದುಃಖಕರ ಘಟನೆ ನಡೆದಿದೆ.

ಒಂದು ವಾರದ ಹಿಂದೆ ಅಥಣಿ – ಗೋಕಾಕ್ ರಸ್ತೆಯ ಕೃಷ್ಣ ಸೇತುವೆ ಬಳಿಯ ಕಬ್ಬಿನ ಗದ್ದೆಯಲ್ಲಿ ಸುಟ್ಟ ಗಾಯದಲ್ಲಿ ಮಗು ಪತ್ತೆಯಾಗಿತ್ತು. ಸ್ಥಳೀಯರು ಮಗುವನ್ನು ರಕ್ಷಿಸಿ ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ಕುರಿತು ಅಥಣಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಇಲ್ಲಿಯವರೆಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಆದರೆ ಪೋಷಕರ ಮಾಹಿತಿ ಸಿಗುವ ಮುಂಚೆ ಮಗು ಇಹಲೋಕ ತ್ಯಜಿಸಿದೆ.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವಿನ ಗುರುತಿಗೆ ಎಫ್‌ಎಸ್‌ಎಲ್ ಬೆಂಗಳೂರಿಗೆ ಸ್ಯಾಂಪಲ್ ರವಾನಿಸಿದ್ದರು. ವಿಡಿಯೋ ಕ್ಲಿಯರ್ ಇಲ್ಲದಕ್ಕೆ ಸ್ಯಾಂಪಲ್ ಎಫ್‌ಎಸ್‌ಎಲ್ ರಿಜೆಕ್ಟ್ ಮಾಡಿತ್ತು. ಸಧ್ಯ ಮಗುವಿನ ಮೃತದೇಹವನ್ನು ಶವಾಗಾರಕ್ಕೆ ಶಿಪ್ಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು