12:15 PM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ರಾಜ್ಯದ ಎಲ್ಲ ಶಾಲೆಗಳಲ್ಲಿ ನವೆಂಬರ್ 1ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ಆರಂಭ

02/10/2021, 12:25

ಬೆಂಗಳೂರು(reporterkarnataka.com): ನವೆಂಬರ್ 1ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ವಿತರಣೆ ಮಾಡುವ ಮೂಲಕ ರಾಜ್ಯದ ಶಾಲೆಗಳಲ್ಲಿ ಸ್ಥಗಿತಗೊಂಡಿದ್ದ

ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ವಿಧ್ಯುಕ್ತವಾಗಿ ಆರಂಭಿಸೋದಕ್ಕೆ ರಾಜ್ಯ ಸರಕಾರ ಆದೇಶಿಸಿದೆ.

ದಿನಪೂರ್ತಿ ತರಗತಿಯ ನಡೆಸುವಂತೆ ಸುತ್ತೋಲೆ ಹೊರಡಿಸಿದ ಬಳಿಕ ಈಗ ಮತ್ತೆ ನ.1ರಿಂದ ಬಿಸಿಯೂಟ, ಬಿಸಿ ಹಾಲು ಪ್ರಾಂಭಿಸುವ ಮೂಲಕ ಪೂರ್ಣ ಪ್ರಮಾಣದ ಶಾಲೆಯು ಪ್ರಾರಂಭಿಸಿದಂತಾಗುತ್ತದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಧ್ಯಾಹ್ನ ಉಪಹಾರ ಯೋಜನೆ ಜಂಟಿ ನಿರ್ದೇಶಕರಾದಂತ ಟಿ.ನಾರಾಯಣಗೌಡ ರಾಜ್ಯದ ಎಲ್ಲಾ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದ್ದು, 2021-22ನೇ ಸಾಲಿನ ಮಧ್ಯಾಹ್ನ ಉಪಹಾರ ಯೋಜನೆಯಡಿ 1ರಿಂದ 10ನೇ ತರಗತಿ ಮಕ್ಕಳಿಗೆ ಶಾಲೆಯಲ್ಲಿ ಬಿಸಿಯೂಟವನ್ನು ಪ್ರಾರಂಭಿಸುವ ಕುರಿತು ಸರ್ಕಾರದ ಹಂತದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕಾಗಿದ್ದು, ಕೆಲವೊಂದು ಕ್ರಮಗಳನ್ನು ಅನುಸರಿಸುವ ಬಗ್ಗೆ ಕರಡು ಪ್ರಸ್ತಾವನೆಯನ್ನು ನಿಮ್ಮ ಅಭಿಪ್ರಾಯ ಅಥವಾ ಸಲಹೆಗಳೇನಾದರೂ ಇದ್ದಲ್ಲಿ ಕೂಡಲೇ ಅ.10 ರೊಳಗೆ ಸಲ್ಲಿಸಲು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು