11:22 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ರೇವ್ ಪಾರ್ಟಿ ಮೇಲೆ ರೈಡ್: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಸೇರಿ 10 ಮಂದಿ ಅರೆಸ್ಟ್ : ಅಪಾರ ಪ್ರಮಾಣದ ಡ್ರಗ್ಸ್ ವಶ

03/10/2021, 11:54

ಮುಂಬಯಿ(reporterkarnataka.com):ಕ್ರೂಸ್ ಹಡಗಿನಲ್ಲಿ ಮೋಜು-ಮಸ್ತಿ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳ ತಂಡ ಕ್ರೋಸ್ ನ ಮೇಲೆ ದಾಳಿ ನಡೆಸಿದ್ದು, ಬಾಲಿವುಡ್ ಪ್ರಸಿದ್ಧ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

ಪಾರ್ಟಿ ಮಾಡುತ್ತಿದ್ದ ಸ್ಥಳದಿಂದ ಕೊಕೇನ್, ಹಶೀಶ್ ಹಾಗೂ ಎಂಡಿಎಂಎ ಸೇರಿ ಹಲವು ರೀತಿಯ ಮಾದಕ ದ್ರವ್ಯಗಳನ್ನು ಪತ್ತೆ ಮಾಡಿ, ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ರೇವ್ ಪಾರ್ಟಿಯಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಪುತ್ರ ಕೂಡಾ ಈ ರೇವ್ ಪಾರ್ಟಿಯಲ್ಲಿದ್ದ ಎನ್ನಲಾಗಿದೆ. ಎರಡು ವಾರಗಳ ಹಿಂದಷ್ಟೇ ಉದ್ಘಾಟನೆಯಾಗಿದ್ದ ಕಾರ್ಡೆಲಿಯಾ ಕ್ರೂಸ್‌ ಲೈನರ್‌ನ “ದಿ ಎಂಪ್ರಸ್‌’ ಹಡಗಿನೊಳಗೆ ಡ್ರಗ್ಸ್‌ ಪಾರ್ಟಿ ನಡೆಸಲಾಗುತ್ತಿತ್ತು. ಈ ಹಡಗು ಮುಂಬೈನಿಂದ ಗೋವಾಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಸಮುದ್ರ ತೀರ ಬಿಟ್ಟು ಸ್ವಲ್ಪ ಸಮಯದಲ್ಲೇ ಪಾರ್ಟಿ ಆರಂಭಿಸಲಾಗಿದೆ.

ಬಂಧಿತರನ್ನು ಇಂದು ಬಾಂಬೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು