1:32 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಭವಾನಿಪುರ ಉಪ ಚುನಾವಣೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಭರ್ಜರಿ ಗೆಲುವು

03/10/2021, 16:22

ಕೊಲ್ಕತ್ತಾ(reporterkarnataka.com) : ಪಶ್ವಿಮ ಬಂಗಾಲದ ಭವಾನಿಪುರ ವಿಧಾನಸಭೆ ಕ್ಷೇತ್ರ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಪ್ರತಿಸ್ಪರ್ಧಿ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು 58,000 ಮತಗಳಿಂದ ಸೋಲಿಸಿದ್ದಾರೆ. ಇದೊಂದು ದಾಖಲೆಯ ಗೆಲುವು ಆಗಿದೆ.

ಮಮತಾ ಬ್ಯಾನರ್ಜಿ 84,709 ಮತಗಳನ್ನು ಪಡೆದರೆ, ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ 26,320 ಮತಗಳನ್ನು ಪಡೆದಿದ್ದಾರೆ. ಸಿಎಂಪಿ ಅಭ್ಯರ್ಥಿ ಶ್ರೀಜಿಬ್ ಬಿಸ್ವಾಸ್ 4,201 ಮತಗಳನ್ನು ಗಳಿಸಿದ್ದಾರೆ.

ಕಳೆದ ಮೇನಲ್ಲಿ ನಡೆದಿದ್ದ ಬಂಗಾಳ ಸಾರ್ವತ್ರಿಕ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸೋಲು ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ 6 ತಿಂಗಳ ಒಳಗೆ ಅವರು ಶಾಸಕರಾಗಿ ಆಯ್ಕೆಯಾಗುವುದು ಸಾಂವಿಧಾನಿಕವಾಗಿ ಅನಿವಾರ್ಯಾಗಿತ್ತು. ಹಾಗಾಗಿ ಭವಾನಿಪುರ ಕ್ಷೇತ್ರದಿಂದ ಆಯ್ಕೆಯಾಗಿದ್ದ

ಶೋಭಂದೇಬ್ ಚಟ್ಟೋಪಾಧ್ಯಾಯ ಅವರು ಮಮತಾ ಬ್ಯಾನರ್ಜಿಗೆ ಅವರು ಶಾಸಕರಾಗುವ ಸಲುವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ

ನೀಡಿದ್ದರು. ಇಲ್ಲಿ ಉಪ ಚುನಾವಣೆ ನಡೆದು ಮಮತಾ ಬ್ಯಾನರ್ಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು