11:59 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಸಂಗೀತ ವಿದ್ವಾನ್ ನಾಗನವಳಚಿಲು ಸೋಮಶೇಖರ ಮಯ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

03/10/2021, 16:39

ಬೆಂಗಳೂರು(reporterkarnataka.com):.ಸಂಗೀತ ಕ್ಷೇತ್ರದಲ್ಲಿ ವಿಷೇಶ ಸಾಧನೆಗೈದು ನಾಡಿನ ಜನಮನ ದಲ್ಲಿ ಶಾಂತಿಯನ್ನು ಸಾರುವಲ್ಲಿ ಸುಧೀರ್ಘ ಕಾಲದಿಂದಲೂ ಕಾರ್ಯಕ್ರಮ ಗಳನ್ನು ನೀಡುತ್ತಾ ಜನಮನ್ನಣೆ ಗಳಿಸಿದ ಬಂಟ್ವಾಳ ನಾಗನವಳಚಿಲು ಸೋಮಶೇಖರ ಮಯ್ಯರಿಗೆ INDIAN EMPIRE UNIVERSITY ಯು  ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ.

ಈ ಬಾರಿ ಗಾಂಧಿ ಜಯಂತಿಯಂದು ಬೆಂಗಳೂರಿನ ಸಮೀಪದ ಹೊಸೂರಿನಲ್ಲಿ ಕಾರ್ಯಕ್ರಮವು ಯುನಿವರ್ಸಿಟಿಯ ಮುಖ್ಯಸ್ಥರ ಸಮ್ಮುಖದಲ್ಲಿ ನೆರವೇರಿತು. ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ರಾಗಿರುವ ಭಾರತ ಸರಕಾರದ NITI ನೀತಿ ಆಯೋಗದಡಿ ಇಂಡಿಯನ್ ಎಂಪಾಯರ್ ಯುನಿವರ್ಸಿಟಿ ಕಾರ್ಯನಿರ್ವಹಿಸುತ್ತಿದ್ದು, ಈ ಬಾರಿ ಕರ್ನಾಟಕದ 22 ಸಾಧಕರನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ. 

ಸೋಮಶೇಖರ್ ಮಯ್ಯ ಅವರು ಈಗಾಗಲೇ ಹಿಂದೂಸ್ತಾನಿ ಸಂಗೀತದಲ್ಲಿ ಕರ್ನಾಟಕ ಸರ್ಕಾರ ದಿಂದ ನಡೆಸಿರುವ ಗಾಯನ ಮತ್ತು ತಾಳ ವಾದ್ಯ ವಿಷಯಗಳೆರಡರಲ್ಲಿಯೂ ವಿದ್ವತ್ ಪದವಿ , ಅಖಿಲ ಗಂಧರ್ವ ಮಹಾವಿದ್ಯಾಲಯ ಮುಂಬಯಿ ಸಂಸ್ಥೆ ಯಿಂದ  ಗಾಯನ ಸಂಗೀತದಲ್ಲಿ ವಿಶಾರದ ಹಾಗೂ ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ. ಕರ್ನಾಟಕ ಸರ್ಕಾರ ನಡೆಸುತ್ತಿರುವ ಸಂಗೀತ ಪರೀಕ್ಷೆ ಗಳಿಗೆ ಪ್ರಾಯೋಗಿಕ ಪರೀಕ್ಷಕರಾಗಿ 1991 ರಿಂದಲೂ ನಿರಂತರವಾಗಿ  ಸೇವೆ ಸಲ್ಲಿಸುತ್ತಿದ್ದುದಲ್ಲದೇ ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಾ ಜನಮನ್ನಣೆಗೆ ಪಾತ್ರರಾಗಿದ್ದಾರೆ.  ಜಿಲ್ಲಾ ಹಾಗೂ  ರಾಜ್ಯ ಮಟ್ಟದಲ್ಲೂ ಪ್ರಶಸ್ತಿಗಳನ್ನು ಗೆಲ್ಲುತ್ತಾ ಬಂದಿರುತ್ತಾರೆ.

ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದ ಇವರಿಗೆ ಕಲಾಭಿಮಾನಿ ನಾಗರಿಕ ಪುರ ಜನರು  ‘ ಗಾನಕೇಸರಿ ‘ ಬಿರುದು ನೀಡಿ ಗೌರವಿಸಿರುತ್ತಾರೆ. ಮೂಡಬಿದ್ರೆ ಯಲ್ಲಿ ಕಂದಾಯ ಅಧಿಕಾರಿ ಯಾಗಿಯೂ ಸೇವೆ ಸಲ್ಲಿಸಿದ್ದ ಇವರು ಪ್ರಸ್ತುತ ಮೂಡಬಿದ್ರೆ ಯಲ್ಲಿ ನೆಲೆಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು