12:58 PM Wednesday16 - July 2025
ಬ್ರೇಕಿಂಗ್ ನ್ಯೂಸ್
Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ…

ಇತ್ತೀಚಿನ ಸುದ್ದಿ

ಸಂಗೀತ ವಿದ್ವಾನ್ ನಾಗನವಳಚಿಲು ಸೋಮಶೇಖರ ಮಯ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

03/10/2021, 16:39

ಬೆಂಗಳೂರು(reporterkarnataka.com):.ಸಂಗೀತ ಕ್ಷೇತ್ರದಲ್ಲಿ ವಿಷೇಶ ಸಾಧನೆಗೈದು ನಾಡಿನ ಜನಮನ ದಲ್ಲಿ ಶಾಂತಿಯನ್ನು ಸಾರುವಲ್ಲಿ ಸುಧೀರ್ಘ ಕಾಲದಿಂದಲೂ ಕಾರ್ಯಕ್ರಮ ಗಳನ್ನು ನೀಡುತ್ತಾ ಜನಮನ್ನಣೆ ಗಳಿಸಿದ ಬಂಟ್ವಾಳ ನಾಗನವಳಚಿಲು ಸೋಮಶೇಖರ ಮಯ್ಯರಿಗೆ INDIAN EMPIRE UNIVERSITY ಯು  ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ.

ಈ ಬಾರಿ ಗಾಂಧಿ ಜಯಂತಿಯಂದು ಬೆಂಗಳೂರಿನ ಸಮೀಪದ ಹೊಸೂರಿನಲ್ಲಿ ಕಾರ್ಯಕ್ರಮವು ಯುನಿವರ್ಸಿಟಿಯ ಮುಖ್ಯಸ್ಥರ ಸಮ್ಮುಖದಲ್ಲಿ ನೆರವೇರಿತು. ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ರಾಗಿರುವ ಭಾರತ ಸರಕಾರದ NITI ನೀತಿ ಆಯೋಗದಡಿ ಇಂಡಿಯನ್ ಎಂಪಾಯರ್ ಯುನಿವರ್ಸಿಟಿ ಕಾರ್ಯನಿರ್ವಹಿಸುತ್ತಿದ್ದು, ಈ ಬಾರಿ ಕರ್ನಾಟಕದ 22 ಸಾಧಕರನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ. 

ಸೋಮಶೇಖರ್ ಮಯ್ಯ ಅವರು ಈಗಾಗಲೇ ಹಿಂದೂಸ್ತಾನಿ ಸಂಗೀತದಲ್ಲಿ ಕರ್ನಾಟಕ ಸರ್ಕಾರ ದಿಂದ ನಡೆಸಿರುವ ಗಾಯನ ಮತ್ತು ತಾಳ ವಾದ್ಯ ವಿಷಯಗಳೆರಡರಲ್ಲಿಯೂ ವಿದ್ವತ್ ಪದವಿ , ಅಖಿಲ ಗಂಧರ್ವ ಮಹಾವಿದ್ಯಾಲಯ ಮುಂಬಯಿ ಸಂಸ್ಥೆ ಯಿಂದ  ಗಾಯನ ಸಂಗೀತದಲ್ಲಿ ವಿಶಾರದ ಹಾಗೂ ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ. ಕರ್ನಾಟಕ ಸರ್ಕಾರ ನಡೆಸುತ್ತಿರುವ ಸಂಗೀತ ಪರೀಕ್ಷೆ ಗಳಿಗೆ ಪ್ರಾಯೋಗಿಕ ಪರೀಕ್ಷಕರಾಗಿ 1991 ರಿಂದಲೂ ನಿರಂತರವಾಗಿ  ಸೇವೆ ಸಲ್ಲಿಸುತ್ತಿದ್ದುದಲ್ಲದೇ ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಾ ಜನಮನ್ನಣೆಗೆ ಪಾತ್ರರಾಗಿದ್ದಾರೆ.  ಜಿಲ್ಲಾ ಹಾಗೂ  ರಾಜ್ಯ ಮಟ್ಟದಲ್ಲೂ ಪ್ರಶಸ್ತಿಗಳನ್ನು ಗೆಲ್ಲುತ್ತಾ ಬಂದಿರುತ್ತಾರೆ.

ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದ ಇವರಿಗೆ ಕಲಾಭಿಮಾನಿ ನಾಗರಿಕ ಪುರ ಜನರು  ‘ ಗಾನಕೇಸರಿ ‘ ಬಿರುದು ನೀಡಿ ಗೌರವಿಸಿರುತ್ತಾರೆ. ಮೂಡಬಿದ್ರೆ ಯಲ್ಲಿ ಕಂದಾಯ ಅಧಿಕಾರಿ ಯಾಗಿಯೂ ಸೇವೆ ಸಲ್ಲಿಸಿದ್ದ ಇವರು ಪ್ರಸ್ತುತ ಮೂಡಬಿದ್ರೆ ಯಲ್ಲಿ ನೆಲೆಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು