3:03 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಸಂಗೀತ ವಿದ್ವಾನ್ ನಾಗನವಳಚಿಲು ಸೋಮಶೇಖರ ಮಯ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

03/10/2021, 16:39

ಬೆಂಗಳೂರು(reporterkarnataka.com):.ಸಂಗೀತ ಕ್ಷೇತ್ರದಲ್ಲಿ ವಿಷೇಶ ಸಾಧನೆಗೈದು ನಾಡಿನ ಜನಮನ ದಲ್ಲಿ ಶಾಂತಿಯನ್ನು ಸಾರುವಲ್ಲಿ ಸುಧೀರ್ಘ ಕಾಲದಿಂದಲೂ ಕಾರ್ಯಕ್ರಮ ಗಳನ್ನು ನೀಡುತ್ತಾ ಜನಮನ್ನಣೆ ಗಳಿಸಿದ ಬಂಟ್ವಾಳ ನಾಗನವಳಚಿಲು ಸೋಮಶೇಖರ ಮಯ್ಯರಿಗೆ INDIAN EMPIRE UNIVERSITY ಯು  ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ.

ಈ ಬಾರಿ ಗಾಂಧಿ ಜಯಂತಿಯಂದು ಬೆಂಗಳೂರಿನ ಸಮೀಪದ ಹೊಸೂರಿನಲ್ಲಿ ಕಾರ್ಯಕ್ರಮವು ಯುನಿವರ್ಸಿಟಿಯ ಮುಖ್ಯಸ್ಥರ ಸಮ್ಮುಖದಲ್ಲಿ ನೆರವೇರಿತು. ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ರಾಗಿರುವ ಭಾರತ ಸರಕಾರದ NITI ನೀತಿ ಆಯೋಗದಡಿ ಇಂಡಿಯನ್ ಎಂಪಾಯರ್ ಯುನಿವರ್ಸಿಟಿ ಕಾರ್ಯನಿರ್ವಹಿಸುತ್ತಿದ್ದು, ಈ ಬಾರಿ ಕರ್ನಾಟಕದ 22 ಸಾಧಕರನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ. 

ಸೋಮಶೇಖರ್ ಮಯ್ಯ ಅವರು ಈಗಾಗಲೇ ಹಿಂದೂಸ್ತಾನಿ ಸಂಗೀತದಲ್ಲಿ ಕರ್ನಾಟಕ ಸರ್ಕಾರ ದಿಂದ ನಡೆಸಿರುವ ಗಾಯನ ಮತ್ತು ತಾಳ ವಾದ್ಯ ವಿಷಯಗಳೆರಡರಲ್ಲಿಯೂ ವಿದ್ವತ್ ಪದವಿ , ಅಖಿಲ ಗಂಧರ್ವ ಮಹಾವಿದ್ಯಾಲಯ ಮುಂಬಯಿ ಸಂಸ್ಥೆ ಯಿಂದ  ಗಾಯನ ಸಂಗೀತದಲ್ಲಿ ವಿಶಾರದ ಹಾಗೂ ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ. ಕರ್ನಾಟಕ ಸರ್ಕಾರ ನಡೆಸುತ್ತಿರುವ ಸಂಗೀತ ಪರೀಕ್ಷೆ ಗಳಿಗೆ ಪ್ರಾಯೋಗಿಕ ಪರೀಕ್ಷಕರಾಗಿ 1991 ರಿಂದಲೂ ನಿರಂತರವಾಗಿ  ಸೇವೆ ಸಲ್ಲಿಸುತ್ತಿದ್ದುದಲ್ಲದೇ ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಾ ಜನಮನ್ನಣೆಗೆ ಪಾತ್ರರಾಗಿದ್ದಾರೆ.  ಜಿಲ್ಲಾ ಹಾಗೂ  ರಾಜ್ಯ ಮಟ್ಟದಲ್ಲೂ ಪ್ರಶಸ್ತಿಗಳನ್ನು ಗೆಲ್ಲುತ್ತಾ ಬಂದಿರುತ್ತಾರೆ.

ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದ ಇವರಿಗೆ ಕಲಾಭಿಮಾನಿ ನಾಗರಿಕ ಪುರ ಜನರು  ‘ ಗಾನಕೇಸರಿ ‘ ಬಿರುದು ನೀಡಿ ಗೌರವಿಸಿರುತ್ತಾರೆ. ಮೂಡಬಿದ್ರೆ ಯಲ್ಲಿ ಕಂದಾಯ ಅಧಿಕಾರಿ ಯಾಗಿಯೂ ಸೇವೆ ಸಲ್ಲಿಸಿದ್ದ ಇವರು ಪ್ರಸ್ತುತ ಮೂಡಬಿದ್ರೆ ಯಲ್ಲಿ ನೆಲೆಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು