1:39 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಅನಾಥ, ಬಡ ಮಕ್ಕಳಿಗೆ ನಿತ್ಯ ಅನ್ನದಾನ: ಮಹಾನ್ ಸಾಧಕ ಮಸ್ಕಿಯ ಡಾ. ಶಿವಶರಣಪ್ಪ ಇತ್ಲಿ

03/10/2021, 16:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸಿಂಧನೂರಿನ ಪಿಡಬ್ಲ್ಯೂಡಿ ಕ್ಯಾಂಪ್ ನಲ್ಲಿರುವ ಆಶಾಕಿರಣ ಅನಾಥ ಮತ್ತು ಬಡಮಕ್ಕಳ ಆಶ್ರಮದಲ್ಲಿ ನಿತ್ಯ ಅನ್ನದಾನ ಜತೆಗೆ ಶಿಕ್ಷಣಕ್ಕೆ ಸಾಥ್ ನೀಡುತ್ತಿರುವ ಡಾ. ಶಿವಶರಣಪ್ಪ ಕುಟುಂಬವು ಇದೀಗ ಮಸ್ಕಿ ಭಾಗದಲ್ಲಿ ಡಾ. ಶಿವಶರಣಪ್ಪ ಫೌಂಡೇಶನ್ ಚಾಲನೆ ನೀಡಿದೆ.


ಮೂಲತಃ ರಾಯಚೂರಿನವರಾದ ಡಾ. ಶಿವಶರಣಪ್ಪ ಕುಟುಂಬವು 50 ವರ್ಷಗಳ ಹಿಂದೆ ಮಸ್ಕಿಗೆ ಆಗಮಿಸಿತ್ತು. ಮಸ್ಕಿಯಲ್ಲಿ ಆಸ್ಪತ್ರೆ ತೆರೆದು ಡಾ. ಇತ್ಲಿ ಅವರು ವೈದ್ಯಕೀಯ ನೆರವಿನ ಜತೆಗೆ ಸಮಾಜಮುಖಿ ಕೆಲಸ ಮಾಡಲಾರಂಭಿಸಿದರು. ಡಾ. ಇತ್ಲಿ ಅವರ ಪುಣ್ಯ ಕಾರ್ಯಕ್ಕೆ ಅವರ ಕುಟುಂಬ ಕೈಜೋಡಿಸಿತು. ಇದೀಗ ಡಾ. ಶಿವಶರಣಪ್ಪ ಫೌಂಡೇಶನ್ ಎಂಬ ಸಂಸ್ಥೆ ತಲೆ ಎತ್ತಿ ನಿಂತಿದೆ. ಡಾ. ಇತ್ಲಿ ಅವರು ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ ಘನತೆ ಮೆರೆದಿದ್ದಾರೆ. ಇಲ್ಲಿ ಬಡವರು, ಅನಾಥರು, ದಿಕ್ಕು ಇಲ್ಲದವರು ಡಾ. ಇತ್ಲಿ ಅವರನ್ನು ದೇವರ ತರಹ ಪೂಜಿಸುತ್ತಾರೆ. ಸಿಂಧನೂರಿನ ಪಿಡಬ್ಲ್ಯೂಡಿಕ್ಯಾಂಪ್ ನಲ್ಲಿರುವ ಆಶಾಕಿರಣ ಅನಾಥ ಮತ್ತು ಬಡಮಕ್ಕಳಿಗೆ ಅನ್ನದಾನ ಮಾಡುತ್ತಿದ್ದರು. ಜತೆಗೆ ಅವರ ಶಿಕ್ಷಣಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು