6:25 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಅನಾಥ, ಬಡ ಮಕ್ಕಳಿಗೆ ನಿತ್ಯ ಅನ್ನದಾನ: ಮಹಾನ್ ಸಾಧಕ ಮಸ್ಕಿಯ ಡಾ. ಶಿವಶರಣಪ್ಪ ಇತ್ಲಿ

03/10/2021, 16:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸಿಂಧನೂರಿನ ಪಿಡಬ್ಲ್ಯೂಡಿ ಕ್ಯಾಂಪ್ ನಲ್ಲಿರುವ ಆಶಾಕಿರಣ ಅನಾಥ ಮತ್ತು ಬಡಮಕ್ಕಳ ಆಶ್ರಮದಲ್ಲಿ ನಿತ್ಯ ಅನ್ನದಾನ ಜತೆಗೆ ಶಿಕ್ಷಣಕ್ಕೆ ಸಾಥ್ ನೀಡುತ್ತಿರುವ ಡಾ. ಶಿವಶರಣಪ್ಪ ಕುಟುಂಬವು ಇದೀಗ ಮಸ್ಕಿ ಭಾಗದಲ್ಲಿ ಡಾ. ಶಿವಶರಣಪ್ಪ ಫೌಂಡೇಶನ್ ಚಾಲನೆ ನೀಡಿದೆ.


ಮೂಲತಃ ರಾಯಚೂರಿನವರಾದ ಡಾ. ಶಿವಶರಣಪ್ಪ ಕುಟುಂಬವು 50 ವರ್ಷಗಳ ಹಿಂದೆ ಮಸ್ಕಿಗೆ ಆಗಮಿಸಿತ್ತು. ಮಸ್ಕಿಯಲ್ಲಿ ಆಸ್ಪತ್ರೆ ತೆರೆದು ಡಾ. ಇತ್ಲಿ ಅವರು ವೈದ್ಯಕೀಯ ನೆರವಿನ ಜತೆಗೆ ಸಮಾಜಮುಖಿ ಕೆಲಸ ಮಾಡಲಾರಂಭಿಸಿದರು. ಡಾ. ಇತ್ಲಿ ಅವರ ಪುಣ್ಯ ಕಾರ್ಯಕ್ಕೆ ಅವರ ಕುಟುಂಬ ಕೈಜೋಡಿಸಿತು. ಇದೀಗ ಡಾ. ಶಿವಶರಣಪ್ಪ ಫೌಂಡೇಶನ್ ಎಂಬ ಸಂಸ್ಥೆ ತಲೆ ಎತ್ತಿ ನಿಂತಿದೆ. ಡಾ. ಇತ್ಲಿ ಅವರು ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ ಘನತೆ ಮೆರೆದಿದ್ದಾರೆ. ಇಲ್ಲಿ ಬಡವರು, ಅನಾಥರು, ದಿಕ್ಕು ಇಲ್ಲದವರು ಡಾ. ಇತ್ಲಿ ಅವರನ್ನು ದೇವರ ತರಹ ಪೂಜಿಸುತ್ತಾರೆ. ಸಿಂಧನೂರಿನ ಪಿಡಬ್ಲ್ಯೂಡಿಕ್ಯಾಂಪ್ ನಲ್ಲಿರುವ ಆಶಾಕಿರಣ ಅನಾಥ ಮತ್ತು ಬಡಮಕ್ಕಳಿಗೆ ಅನ್ನದಾನ ಮಾಡುತ್ತಿದ್ದರು. ಜತೆಗೆ ಅವರ ಶಿಕ್ಷಣಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು