4:22 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಅನಾಥ, ಬಡ ಮಕ್ಕಳಿಗೆ ನಿತ್ಯ ಅನ್ನದಾನ: ಮಹಾನ್ ಸಾಧಕ ಮಸ್ಕಿಯ ಡಾ. ಶಿವಶರಣಪ್ಪ ಇತ್ಲಿ

03/10/2021, 16:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸಿಂಧನೂರಿನ ಪಿಡಬ್ಲ್ಯೂಡಿ ಕ್ಯಾಂಪ್ ನಲ್ಲಿರುವ ಆಶಾಕಿರಣ ಅನಾಥ ಮತ್ತು ಬಡಮಕ್ಕಳ ಆಶ್ರಮದಲ್ಲಿ ನಿತ್ಯ ಅನ್ನದಾನ ಜತೆಗೆ ಶಿಕ್ಷಣಕ್ಕೆ ಸಾಥ್ ನೀಡುತ್ತಿರುವ ಡಾ. ಶಿವಶರಣಪ್ಪ ಕುಟುಂಬವು ಇದೀಗ ಮಸ್ಕಿ ಭಾಗದಲ್ಲಿ ಡಾ. ಶಿವಶರಣಪ್ಪ ಫೌಂಡೇಶನ್ ಚಾಲನೆ ನೀಡಿದೆ.


ಮೂಲತಃ ರಾಯಚೂರಿನವರಾದ ಡಾ. ಶಿವಶರಣಪ್ಪ ಕುಟುಂಬವು 50 ವರ್ಷಗಳ ಹಿಂದೆ ಮಸ್ಕಿಗೆ ಆಗಮಿಸಿತ್ತು. ಮಸ್ಕಿಯಲ್ಲಿ ಆಸ್ಪತ್ರೆ ತೆರೆದು ಡಾ. ಇತ್ಲಿ ಅವರು ವೈದ್ಯಕೀಯ ನೆರವಿನ ಜತೆಗೆ ಸಮಾಜಮುಖಿ ಕೆಲಸ ಮಾಡಲಾರಂಭಿಸಿದರು. ಡಾ. ಇತ್ಲಿ ಅವರ ಪುಣ್ಯ ಕಾರ್ಯಕ್ಕೆ ಅವರ ಕುಟುಂಬ ಕೈಜೋಡಿಸಿತು. ಇದೀಗ ಡಾ. ಶಿವಶರಣಪ್ಪ ಫೌಂಡೇಶನ್ ಎಂಬ ಸಂಸ್ಥೆ ತಲೆ ಎತ್ತಿ ನಿಂತಿದೆ. ಡಾ. ಇತ್ಲಿ ಅವರು ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ ಘನತೆ ಮೆರೆದಿದ್ದಾರೆ. ಇಲ್ಲಿ ಬಡವರು, ಅನಾಥರು, ದಿಕ್ಕು ಇಲ್ಲದವರು ಡಾ. ಇತ್ಲಿ ಅವರನ್ನು ದೇವರ ತರಹ ಪೂಜಿಸುತ್ತಾರೆ. ಸಿಂಧನೂರಿನ ಪಿಡಬ್ಲ್ಯೂಡಿಕ್ಯಾಂಪ್ ನಲ್ಲಿರುವ ಆಶಾಕಿರಣ ಅನಾಥ ಮತ್ತು ಬಡಮಕ್ಕಳಿಗೆ ಅನ್ನದಾನ ಮಾಡುತ್ತಿದ್ದರು. ಜತೆಗೆ ಅವರ ಶಿಕ್ಷಣಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು