10:12 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಒಳ್ಳೆಯ ಸಂಸ್ಕಾರ ಕಲಿತರೆ ಜವಾಬ್ದಾರಿಯುತ ‌ವ್ಯಕ್ತಿಯಾಗಲು ಸಾಧ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕ್

03/10/2021, 20:00

ಕಾರ್ಕಳ(reporterkarnataka.com): ಮಕ್ಕಳು ಒಳ್ಳೆಯ ಸಂಸ್ಕಾರ ಕಲಿತರೆ ಮುಂದಿನ ದಿನಗಳಲ್ಲಿ ಒಳ್ಳೆಯ ಜವಾಬ್ದಾರಿಯುತ ಶ್ರೇಷ್ಠ ವ್ಯಕ್ತಿಯಾಗುತ್ತಾನೆ ಎಂದು ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕ್ ಹೇಳಿದರು.

ಅವರು ಕಾರ್ಕಳ ತಾಲೂಕಿನ ಮುಂಡ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ‘ನಮ್ಮ ಫ್ರೆಂಡ್ಸ್ ಮುಂಡ್ಕೂರು’ ಇದರ “25ನೇ ಹೆಜ್ಜೆಯ ಸಂಭ್ರಮ”ದ ಅಂಗವಾಗಿ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಣೆ ಹಾಗೂ ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಜಾಥಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನ ಸಂಚಾಲಕ ಡಾ. ಪಿ.ಬಾಲಕೃಷ್ಣ ಆಳ್ವ ಅವರು, ಮುಂಡ್ಕೂರು ಸ.ಹಿ.ಪ್ರಾ.ಶಾಲೆಯಲ್ಲಿ ಪ್ರಸ್ತುತ ವರ್ಷದಲ್ಲಿ ಒಂದನೇ ತರಗತಿಗೆ ಸೇರ್ಪಡೆಯಾದ 21 ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಿ, ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯಂದು ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಧನ ಸಹಾಯ ನೀಡಿದ ತಂಡಕ್ಕೆ ಶುಭಾಶಂಸನೆ ಸಲ್ಲಿಸಿದರು.

ಕಜೆ ಮಾರಿಗುಡಿಯ ಗೌರವಾಧ್ಯಕ್ಷ ಎಂ.ಜಿ.ಕರ್ಕೇರ, ಚಂದ್ರಹಾಸ ಶೆಟ್ಟಿ, ನಮ್ಮ ಫ್ರೆಂಡ್ಸ್ ಮುಂಡ್ಕೂರು ತಂಡದ ಅಧ್ಯಕ್ಷ ಪ್ರಕಾಶ್ ನಾಯ್ಕ್, ಕಾರ್ಯದರ್ಶಿ ಅರುಣ್ ರಾವ್, ಗೌರವ ಸಲಹೆಗಾರರಾದ ಪ್ರಭಾಕರ ಶೆಟ್ಟಿ ಕೊಂಡಲ್ಲಿ, ಉದಯ್ ಕುಮಾರ್, ಶರತ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯಿನಿ ಪೂರ್ಣಿಮಾ ಭಟ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ ಪೂಜಾರಿ, ಶ್ರೀಮತಿ ಲಲಿತಾ, ಪ್ರಮೋದ್ ಕಜೆ, ಪ್ರಶಾಂತ್ ಆಚಾರ್ಯ ಮತ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು