3:55 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವ: ಪುತ್ತೂರು ಕುಡಿಪ್ಪಾಡಿ ಸರಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ 

03/10/2021, 23:21

ಪುತ್ತೂರು(reporterkarnatakanews): ಗಾಂಧಿ ಜಯಂತಿಯ ಪ್ರಯುಕ್ತ ಪುತ್ತೂರು ವಿವೇಕಾನಂದ ಕಾಲೇಜಿನ  ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್, ಗ್ರಾಮ ವಿಕಸನ ಸಮಿತಿ ಸಹಾಯದೊಂದಿಗೆ ಕುಡಿಪ್ಪಾಡಿಯ ದ.ಕ. ಜಿಪಂ ಉ. ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು  

ಕಾರ್ಯಕ್ರಮವು ಸರ್ವಧರ್ಮ ಪ್ರಾರ್ಥನೆಯ ಮೂಲಕ ಪ್ರಾರಂಭವಾಯಿತು. ಬಂದಿರುವ ಎಲ್ಲಾ ಅತಿಥಿಗಳು ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿಸಲಾಯಿತು.

ಕೆಲವು  ವಿದ್ಯಾರ್ಥಿಗಳು ಗಾಂಧೀಜಿ ಯವರ ಜೀವನ ಶೈಲಿಯ ಬಗ್ಗೆ ಭಾಷಣಗಳನ್ನು ಮಂಡಿಸಿದರು.

ಕಾರ್ಯಕ್ರಮದ ಅತಿಥಿಗಳು ಗಾಂಧೀಜಿಯ ಜೀವನದ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಾರಿ ಹೇಳಿದರು


ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಗೋಮುಖ ವಹಿಸಿದ್ದರು.

ಅತಿಥಿಗಳಾಗಿ ರಾಮ  ಜೋಹಿಷರು (ಗೌರವ ಅಧ್ಯಕ್ಷರು ಕುಡಿಪ್ಪಾಡಿ ಶಾಲೆ ಮತ್ತು ಉಪಾಧ್ಯಕ್ಷರು ಗ್ರಾಮವಿಕಾಸನ ಸಮಿತಿ) ಅವರು ವಹಿಸಿದ್ದರು. 

ಈ ಸಂದರ್ಭದಲ್ಲಿ  ವಿವೇಕಾನಂದ ಕಾಲೇಜಿನ ಉಪನ್ಯಾಸಕರು, ಕುಡಿಪ್ಪಾಡಿ ಶಾಲೆಯ ಶಿಕ್ಷಕರು ಗ್ರಾಮ ಸಮಿತಿಯ ಸದಸ್ಯರು, ಗ್ರಾಮಸ್ಥರು, ಮಕ್ಕಳು, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು, ರೆಡ್ ಕ್ರಾಸ್ ಸಂಸ್ಥೆ ಸ್ವಯಂ ಸೇವಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಹಾಗೂ ಸ್ವಾಗತವನ್ನು ಕುಡಿಪ್ಪಾಡಿ ಶಾಲೆಯ ಮುಖ್ಯೋಪಾಧ್ಯಾಯಿನಿ  ವಿಜಯ ಪಿ ನೆರವೇರಿಸಿದರು. ಸಭಾ ಕಾರ್ಯಕ್ರಮದ ನಂತರ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು, ರೆಡ್ ಕ್ರಾಸ್ ಸ್ವಯಂ ಸೇವಕರು ಗ್ರಾಮಸ್ಥರು ಮತ್ತು ಮಕ್ಕಳು ಸ್ವಚ್ಛತಾ ಕಾರ್ಯಕ್ರಮ ಮತ್ತು  ಗಿಡ ನೆಡುವ ಕಾರ್ಯ ವನ್ನು ಹಮ್ಮಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು