12:07 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವ: ಪುತ್ತೂರು ಕುಡಿಪ್ಪಾಡಿ ಸರಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ 

03/10/2021, 23:21

ಪುತ್ತೂರು(reporterkarnatakanews): ಗಾಂಧಿ ಜಯಂತಿಯ ಪ್ರಯುಕ್ತ ಪುತ್ತೂರು ವಿವೇಕಾನಂದ ಕಾಲೇಜಿನ  ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್, ಗ್ರಾಮ ವಿಕಸನ ಸಮಿತಿ ಸಹಾಯದೊಂದಿಗೆ ಕುಡಿಪ್ಪಾಡಿಯ ದ.ಕ. ಜಿಪಂ ಉ. ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು  

ಕಾರ್ಯಕ್ರಮವು ಸರ್ವಧರ್ಮ ಪ್ರಾರ್ಥನೆಯ ಮೂಲಕ ಪ್ರಾರಂಭವಾಯಿತು. ಬಂದಿರುವ ಎಲ್ಲಾ ಅತಿಥಿಗಳು ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿಸಲಾಯಿತು.

ಕೆಲವು  ವಿದ್ಯಾರ್ಥಿಗಳು ಗಾಂಧೀಜಿ ಯವರ ಜೀವನ ಶೈಲಿಯ ಬಗ್ಗೆ ಭಾಷಣಗಳನ್ನು ಮಂಡಿಸಿದರು.

ಕಾರ್ಯಕ್ರಮದ ಅತಿಥಿಗಳು ಗಾಂಧೀಜಿಯ ಜೀವನದ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಾರಿ ಹೇಳಿದರು


ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಗೋಮುಖ ವಹಿಸಿದ್ದರು.

ಅತಿಥಿಗಳಾಗಿ ರಾಮ  ಜೋಹಿಷರು (ಗೌರವ ಅಧ್ಯಕ್ಷರು ಕುಡಿಪ್ಪಾಡಿ ಶಾಲೆ ಮತ್ತು ಉಪಾಧ್ಯಕ್ಷರು ಗ್ರಾಮವಿಕಾಸನ ಸಮಿತಿ) ಅವರು ವಹಿಸಿದ್ದರು. 

ಈ ಸಂದರ್ಭದಲ್ಲಿ  ವಿವೇಕಾನಂದ ಕಾಲೇಜಿನ ಉಪನ್ಯಾಸಕರು, ಕುಡಿಪ್ಪಾಡಿ ಶಾಲೆಯ ಶಿಕ್ಷಕರು ಗ್ರಾಮ ಸಮಿತಿಯ ಸದಸ್ಯರು, ಗ್ರಾಮಸ್ಥರು, ಮಕ್ಕಳು, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು, ರೆಡ್ ಕ್ರಾಸ್ ಸಂಸ್ಥೆ ಸ್ವಯಂ ಸೇವಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಹಾಗೂ ಸ್ವಾಗತವನ್ನು ಕುಡಿಪ್ಪಾಡಿ ಶಾಲೆಯ ಮುಖ್ಯೋಪಾಧ್ಯಾಯಿನಿ  ವಿಜಯ ಪಿ ನೆರವೇರಿಸಿದರು. ಸಭಾ ಕಾರ್ಯಕ್ರಮದ ನಂತರ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು, ರೆಡ್ ಕ್ರಾಸ್ ಸ್ವಯಂ ಸೇವಕರು ಗ್ರಾಮಸ್ಥರು ಮತ್ತು ಮಕ್ಕಳು ಸ್ವಚ್ಛತಾ ಕಾರ್ಯಕ್ರಮ ಮತ್ತು  ಗಿಡ ನೆಡುವ ಕಾರ್ಯ ವನ್ನು ಹಮ್ಮಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು