7:26 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ಮೀನು ವ್ಯಾಪಾರಿಯ ಕಿಡ್ನಾಪ್: 15 ಲಕ್ಷ ರೂ. ಬೇಡಿಕೆ; ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು

03/10/2021, 23:48

ಮಲ್ಪೆ(reporterkarnataka.com):  ಮೀನು ವ್ಯಾಪಾರಿಯೊಬ್ಬರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಸಾಧೀಕ್ ಎಂಬವವರು ಈ ಕುರಿತು ದೂರು ನೀಡಿದ್ದಾರೆ.

ಚಿಕ್ಕಮಗಳೂರಿನ ಕೊಪ್ಪದಿಂದ ತನ್ನ ತಮ್ಮ ಸುಲೈಮಾನ್  ಮೀನು ಲಾರಿಯ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಸೆ.30ರಂದು ಬೆಳಗ್ಗೆ 9.00 ಗಂಟೆಗೆ ಕೊಪ್ಪದ ಮನೆಯಿಂದ ಮಲ್ಪೆಗೆ ಮೀನು ಲಾರಿಯ ಚಾಲಕ ಕೆಲಸಕ್ಕೆ ಬಂದಿದ್ದ. ಅ.1ರಂದು ತನ್ನ ಇನ್ನೊಬ್ಬ ತಮ್ಮ ಶಂಶುದ್ದೀನ್ ಎಂಬಾತ ಸುಲೈಮಾನ್ ಗೆ ಕರೆ ಮಾಡಿದಾಗ ಪೋನ್ ಕರೆ ಸ್ವೀಕರಿಸಲಿಲ್ಲ. ಸೆ.2ರಂದು ಬೆಳಗ್ಗೆ 9.00 ಗಂಟೆಗೆ ಸುಲೈಮಾನ್ ನ ಮೊಬೈಲ್ ನಂಬ್ರದಿಂದ ಶಂಶುದ್ದೀನ್ ಗೆ ಕರೆ ಬಂತು. ಆ ಕಡೆಯಿಂದ ಸಮೀರ್ ಎಂಬವನು ಮಾತನಾಡಿ, ಸುಲೈಮಾನ್ ನಮ್ಮ ಜೊತೆಗೆ ಇದ್ದಾನೆ. ಆತನನ್ನು ಬಿಡಬೇಕಾದರೆ ನಮಗೆ 15 ಲಕ್ಷ ಹಣ ಕೊಡಬೇಕು. ಆತನನ್ನು ನಾವು ಸೆ.1ರಂದು ಮಲ್ಪೆಯಿಂದ ಅಪಹರಣ ಮಾಡಿದ್ದೇವೆ ಎಂದು ಹೇಳಿದ್ದನು. ನಂತರ ನಾವು ಮಲ್ಪೆಗೆ ಬಂದು ತಮ್ಮ ಸುಲೈಮಾನ್ ಬಗ್ಗೆ ವಿಚಾರಿಸಿದಾಗ ಸುಲೈಮಾನ್ ಮೀನು ಲಾರಿ ಚಾಲಕ ಕೆಲಸದ  ಜೊತೆಗೆ ಮೀನನ್ನು ಮಲ್ಪೆಯಲ್ಲಿ ತೆಗೆದುಕೊಂಡು ಕೇರಳಕ್ಕೆ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದರು.

ನಂತರ ಸುಲೈಮಾನ್ ಮೊಬೈಲಿಗೆ ಕರೆ ಮಾಡಿದಾಗ ಆಕರೆಯನ್ನು ಸಮೀರ್ ಎಂಬವನು ಸ್ವೀಕರಿಸಿ, ನಮಗೆ ಸುಲೈಮಾನ್ ಮೀನು ವ್ಯವಹಾರದಲ್ಲಿ 15 ಲಕ್ಷ ಹಣ ಕೊಡಬೇಕು. ಆ ಕಾರಣದಿಂದ ಅವನನ್ನು ಕೇರಳದ ಹನಸ್ ಮತ್ತು ಅವರ ಸಹೋದರರು ಅಪಹರಣ ಮಾಡಿರುತ್ತಾರೆ. ನೀವು ಬಂದು 15 ಲಕ್ಷ ಹಣ ಕೊಟ್ಟು ಕರೆದುಕೊಂಡು ಹೋಗಿ. ಇಲ್ಲದಿದ್ದರೆ ಆತನನ್ನು ಕೊಂದು ಸಮುದ್ರಕ್ಕೆ ಬಿಸಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಸಾದಿಕ್ ಮಲ್ಪೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು  ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು