6:46 PM Sunday1 - February 2026
ಬ್ರೇಕಿಂಗ್ ನ್ಯೂಸ್
ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ ವಿರುದ್ಧ ರಾಷ್ಟ್ರವ್ಯಾಪಿ ಕರಾಳ ದಿನ: ಮನೆ ಮನೆಯಲ್ಲಿ ಪ್ರತಿಭಟನೆ

26/05/2021, 19:32

ಮಂಗಳೂರು(reporterkarnataka news) : ಕೊರೊನ ಎರಡನೇ ಅಲೆಯು ದೇಶದಲ್ಲಿ ಅಪಾರ ಸಾವು- ನೋವುಗಳಿಗೆ ಕಾರಣವಾಗಿದೆ. ಕೊರೊನಾ ನಿಯಂತ್ರಿಸಿ ಲಸಿಕೆ ಹಂಚಿ ಜನರಿಗೆ ಧೈರ್ಯ ನೀಡಬೇಕಾಗಿದ್ದ ಪ್ರಧಾನ ಮಂತ್ರಿಗಳು ಮೊಸಳೆ ಕಣ್ಣೀರು ಸುರಿಸಿ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಟೀಕಿಸಿದರು.

ಅವರು ಬುಧವಾರ (ಮೇ 26) ದೆಹಲಿ ರೈತರ ಹೋರಾಟಕ್ಕೆ 6 ತಿಂಗಳು ಮತ್ತು ರೈತ ವಿರೋಧಿ ಕೃಷಿ ಕಾನೂನು ವಾಪಾಸು ಪಡೆಯಲು ಮತ್ತು ಕೋವಿಡ್ ನಿಯಂತ್ರಿಸುವಲ್ಲಿ , ಜನರಿಗೆ ಪರಿಹಾರ ಕ್ರಮ ವಿತರಿಸುವಲ್ಲಿನ ವೈಫಲ್ಯದ ವಿರುದ್ದ  ರಾಷ್ಟ್ರ ವ್ಯಾಪಿ ಕರಾಳ ದಿನದ ಹೋರಾಟಕ್ಕೆ ಬೆಂಬಲಾರ್ಥವಾಗಿ ಡಿವೈಎಫ್ಐ, ಎಸ್ಎಫ್ಐ, ಜನವಾದಿ ಮಹಿಳಾ ಸಂಘಟನೆಗಳ ಕೇಂದ್ರ ಸಮಿತಿಗಳ ಕರೆಯನ್ವಯ ಬುಧವಾರ ರಾಷ್ಟ್ರವ್ಯಾಪಿ ಮನೆ ಮನೆ ಪ್ರತಿಭಟನೆಯನ್ನು ದಕ್ಷಿಣ‌ ಕನ್ನಡ ಜಿಲ್ಲಾದ್ಯಂತ ನಡೆಸಲಾಯಿತು.

ಕೇಂದ್ರ ರಾಜ್ಯ ಸರಕಾರಗಳು ಕೋವಿಡ್ ನಿಯಂತ್ರಿಸುವಲ್ಲಿ ಹಳಿ ತಪ್ಪಿವೆ. ಸರಕಾರದ ಸಾಲು ಸಾಲು ವೈಫಲ್ಯಗಳು  ಘೋರವಾದ ಇತಿಹಾಸ ನಿರ್ಮಿಸುತ್ತಿದೆ. ಜನರು ಆಕ್ಸಿಜನ್, ಲಸಿಕೆ ಸಿಗದೆ ಸಾಯುತ್ತಿದ್ದಾರೆ.  ಜನರ ನೆರವಿಗೆ ಬರಬೇಕಿದ್ದ ಸರಕಾರ ಮಕಾಡೆ ಮಲಗಿದೆ ಎಂದು ಸಂತೋಷ್ ಬಜಾಲ್ ಆರೋಪಿಸಿದರು.

ಡಿವೈಎಫ್ಐ, ಎಸ್ಎಫ್ಐ, ಜನವಾದಿ ಮಹಿಳಾ ಸಂಘಟನೆಯ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಗಳ ಅಧೀನದಲ್ಲಿರುವ ಎಲ್ಲಾ ಘಟಕಗಳ ಕಾರ್ಯಕರ್ತರು ತಮ್ಮ ತಮ್ಮ ಮನೆಗಳಿಂದಲೇ ಕೇಂದ್ರ ಸರಕಾರದ ವಿರುದ್ದ ಘೋಷಣೆಗಳಿರುವ ಭಿತ್ತಿಪತ್ರ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದರು ಎಂದು ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು