1:59 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆನ್ಲೈನ್ ಕಾರ್ಯಾಗಾರ

04/10/2021, 17:47

ಮಂಗಳೂರು(reporterkarnataka.com): ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬೆಸೆಂಟ್‌ ಸಂಧ್ಯಾ ಕಾಲೇಜು, ಮಂಗಳೂರು ಹಾಗೂ ಗೋವಿಂದದಾಸ ಕಾಲೇಜು, ಸುರತ್ಕಲ್‌ನ ವಾಣಿಜ್ಯ ಸ್ನಾತಕೋತ್ತರ ವಿಭಾಗಗಳು ಭಾರತದಲ್ಲಿನ ಮ್ಯೂಚುವಲ್ ಫಂಡ್ಸ್‌ ಸಂಘ (AMFI) ದ ಸಹಯೋಗದೊಂದಿಗೆ ಕಾರ್ಯತಂತ್ರ ಯೋಜನೆಯ ಮೂಲಕ ಆರ್ಥಿಕ ಸಬಲೀಕರಣ” ಎಂಬ ವಿಷಯದ ವೆಬಿನಾರ್  ಆನ್‌ಲೈನ್ ನಲ್ಲಿ ಇತ್ತೀಚಿಗೆ ಜರುಗಿತು. 

ಬೆಸೆಂಟ್ ಸಂಧ್ಯಾ ಕಾಲೇಜಿನ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಅಸಿಸ್ಟೆಂಟ್ ಪ್ರೊ. ತಾರಾ ಶೆಟ್ಟಿ ಆಯೋಜಕರಾಗಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಎಎಂಎಫ್ ಐನ ಹಿರಿಯ ಸಲಹೆಗಾರ ಸೂರ್ಯಕಾಂತ್ ಶರ್ಮಾ (ಭಾರತೀಯ ಭದ್ರತಾ ಏನಿಮಯ ಮಂಡಳಿ (ಸೆಬಿ) ಯ ನಿವೃತ್ತ ಉಪಪ್ರಧಾನ ವ್ಯವಸ್ಥಾಪಕರು) ಭಾಗವಹಿಸಿದ್ದರು. 

ಸೂರ್ಯ ಕಾಂತ  ಶರ್ಮಾ ಪ್ರಾರಂಭದಲ್ಲಿ ವ್ಯಕ್ತಿಗತ ಆರ್ಥಿಕ ಭದ್ರತೆಯ ಬಗ್ಗೆ ವಿವರಿಸಿದರು. ಹೂಡಿಕೆದಾರರು ಸಂಪತ್ತನ್ನು ಕ್ರೋಢೀಕರಿಸುವ ಮೊದಲು ಯೋಚಿಸಿ, ಅರ್ಥಮಾಡಿಕೊಂಡು ಸಾಧ್ಯವಾದಷ್ಟು ಜೀವವಿಮೆಯಲ್ಲಿ ಹಾಗೂ ಸಾಧಾರಣವಾಗಿ ವೈದ್ಯಕೀಯ ವಿಮೆಯಲ್ಲಿ ಹಾಗೂ ತುರ್ತು ಪರಿಸ್ಥಿತಿಗೆಂದು ಉಳಿತಾಯ ಮಾಡಿಕೊಂಡು ನಂತರ ಹೂಡಿಕೆ ಮಾಡಿದರೆ ಉತ್ತಮ ಎಂದು ಹೇಳಿದರು.

ಹೂಡಿಕೆದಾರರು ಉಳಿತಾಯವನ್ನು ಪ್ರತಿ ವರ್ಷ ಶೇಕಡಾ 10ರಷ್ಟು ಹೆಚ್ಚಿಸಬೇಕಾಗುತ್ತದೆ. ಹೂಡಿಕೆದಾರರು ಸಂಪತ್ತನ್ನು ಕೂಡಿಡುವವರಾಗದೇ ಸಂಪತ್ತಿನ ಸೃಷ್ಟಿಕರ್ತನಾಗಬೇಕು ಎಂದು ತಿಳಿಸಿದರು. ವಿವಿಧ ಹೂಡಿಕೆಗಳ ಮೇಲಿನ ಪ್ರತಿಫಲಗಳು, ಪಿ.ಪಿ.ಎಫ್ (PPP), ಎನ್.ಪಿ.ಎಸ್ (NPS) ಸುಕನ್ಯ ಸಮೃದ್ಧಿ ಯೋಜನೆ, ಭದ್ರತಾ ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ಸವಿವರವಾಗಿ ವಿವರಿಸಿ,  ಇವುಗಳು ಮಧ್ಯಮ ವರ್ಗದ ಹಾಗೂ ಮಾಸಿಕ ಸಂಬಳ ಪಡೆಯುವ ಜನಸಾಮಾನ್ಯರಿಗೆ ಉತ್ತಮವಾದ ಉಳಿತಾಯ ಯೋಜನೆಗಳು ಎಂದು ಹೇಳಿದರು.

ಈ ಆನ್‌ಲೈನ್‌ ವೆಬಿನಾರ್‌ನಲ್ಲಿ ಭಾರತದಾದ್ಯಂತ 348 ಜನರು ಸಕ್ರಿಯವಾಗಿ ಭಾಗವಹಿಸಿದ್ದರು.

ಬೆಸೆಂಟ್‌ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ಲಕ್ಷ್ಮೀನಾರಾಯಣ ಭಟ್ ಎ,  ಸ್ವಾಗತಿಸಿ,  ವಾಣಿಜ್ಯ ಸ್ನಾತಕೋತ್ತರ ವಿಭಾಗದ ಅಸಿಸ್ಟೆಂಟ್ ಪ್ರೊ. ಸಾತ್ವಿಕಾ ಶೆಟ್ಟಿ  ನಿರೂಪಿಸಿದರು. 

ಗೋವಿಂದದಾಸ ಕಾಲೇಜಿನ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಅಸಿಸ್ಟೆಂಟ್ ಪ್ರೊ. ಸಜನ್ ಆಚಾರ್ಯ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು