1:02 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆನ್ಲೈನ್ ಕಾರ್ಯಾಗಾರ

04/10/2021, 17:47

ಮಂಗಳೂರು(reporterkarnataka.com): ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬೆಸೆಂಟ್‌ ಸಂಧ್ಯಾ ಕಾಲೇಜು, ಮಂಗಳೂರು ಹಾಗೂ ಗೋವಿಂದದಾಸ ಕಾಲೇಜು, ಸುರತ್ಕಲ್‌ನ ವಾಣಿಜ್ಯ ಸ್ನಾತಕೋತ್ತರ ವಿಭಾಗಗಳು ಭಾರತದಲ್ಲಿನ ಮ್ಯೂಚುವಲ್ ಫಂಡ್ಸ್‌ ಸಂಘ (AMFI) ದ ಸಹಯೋಗದೊಂದಿಗೆ ಕಾರ್ಯತಂತ್ರ ಯೋಜನೆಯ ಮೂಲಕ ಆರ್ಥಿಕ ಸಬಲೀಕರಣ” ಎಂಬ ವಿಷಯದ ವೆಬಿನಾರ್  ಆನ್‌ಲೈನ್ ನಲ್ಲಿ ಇತ್ತೀಚಿಗೆ ಜರುಗಿತು. 

ಬೆಸೆಂಟ್ ಸಂಧ್ಯಾ ಕಾಲೇಜಿನ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಅಸಿಸ್ಟೆಂಟ್ ಪ್ರೊ. ತಾರಾ ಶೆಟ್ಟಿ ಆಯೋಜಕರಾಗಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಎಎಂಎಫ್ ಐನ ಹಿರಿಯ ಸಲಹೆಗಾರ ಸೂರ್ಯಕಾಂತ್ ಶರ್ಮಾ (ಭಾರತೀಯ ಭದ್ರತಾ ಏನಿಮಯ ಮಂಡಳಿ (ಸೆಬಿ) ಯ ನಿವೃತ್ತ ಉಪಪ್ರಧಾನ ವ್ಯವಸ್ಥಾಪಕರು) ಭಾಗವಹಿಸಿದ್ದರು. 

ಸೂರ್ಯ ಕಾಂತ  ಶರ್ಮಾ ಪ್ರಾರಂಭದಲ್ಲಿ ವ್ಯಕ್ತಿಗತ ಆರ್ಥಿಕ ಭದ್ರತೆಯ ಬಗ್ಗೆ ವಿವರಿಸಿದರು. ಹೂಡಿಕೆದಾರರು ಸಂಪತ್ತನ್ನು ಕ್ರೋಢೀಕರಿಸುವ ಮೊದಲು ಯೋಚಿಸಿ, ಅರ್ಥಮಾಡಿಕೊಂಡು ಸಾಧ್ಯವಾದಷ್ಟು ಜೀವವಿಮೆಯಲ್ಲಿ ಹಾಗೂ ಸಾಧಾರಣವಾಗಿ ವೈದ್ಯಕೀಯ ವಿಮೆಯಲ್ಲಿ ಹಾಗೂ ತುರ್ತು ಪರಿಸ್ಥಿತಿಗೆಂದು ಉಳಿತಾಯ ಮಾಡಿಕೊಂಡು ನಂತರ ಹೂಡಿಕೆ ಮಾಡಿದರೆ ಉತ್ತಮ ಎಂದು ಹೇಳಿದರು.

ಹೂಡಿಕೆದಾರರು ಉಳಿತಾಯವನ್ನು ಪ್ರತಿ ವರ್ಷ ಶೇಕಡಾ 10ರಷ್ಟು ಹೆಚ್ಚಿಸಬೇಕಾಗುತ್ತದೆ. ಹೂಡಿಕೆದಾರರು ಸಂಪತ್ತನ್ನು ಕೂಡಿಡುವವರಾಗದೇ ಸಂಪತ್ತಿನ ಸೃಷ್ಟಿಕರ್ತನಾಗಬೇಕು ಎಂದು ತಿಳಿಸಿದರು. ವಿವಿಧ ಹೂಡಿಕೆಗಳ ಮೇಲಿನ ಪ್ರತಿಫಲಗಳು, ಪಿ.ಪಿ.ಎಫ್ (PPP), ಎನ್.ಪಿ.ಎಸ್ (NPS) ಸುಕನ್ಯ ಸಮೃದ್ಧಿ ಯೋಜನೆ, ಭದ್ರತಾ ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ಸವಿವರವಾಗಿ ವಿವರಿಸಿ,  ಇವುಗಳು ಮಧ್ಯಮ ವರ್ಗದ ಹಾಗೂ ಮಾಸಿಕ ಸಂಬಳ ಪಡೆಯುವ ಜನಸಾಮಾನ್ಯರಿಗೆ ಉತ್ತಮವಾದ ಉಳಿತಾಯ ಯೋಜನೆಗಳು ಎಂದು ಹೇಳಿದರು.

ಈ ಆನ್‌ಲೈನ್‌ ವೆಬಿನಾರ್‌ನಲ್ಲಿ ಭಾರತದಾದ್ಯಂತ 348 ಜನರು ಸಕ್ರಿಯವಾಗಿ ಭಾಗವಹಿಸಿದ್ದರು.

ಬೆಸೆಂಟ್‌ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ಲಕ್ಷ್ಮೀನಾರಾಯಣ ಭಟ್ ಎ,  ಸ್ವಾಗತಿಸಿ,  ವಾಣಿಜ್ಯ ಸ್ನಾತಕೋತ್ತರ ವಿಭಾಗದ ಅಸಿಸ್ಟೆಂಟ್ ಪ್ರೊ. ಸಾತ್ವಿಕಾ ಶೆಟ್ಟಿ  ನಿರೂಪಿಸಿದರು. 

ಗೋವಿಂದದಾಸ ಕಾಲೇಜಿನ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಅಸಿಸ್ಟೆಂಟ್ ಪ್ರೊ. ಸಜನ್ ಆಚಾರ್ಯ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು