2:42 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕೃಷಿ ಭೂಮಿ ವಶಕ್ಕೆ ನೋಟಿಸು: ರೊಚ್ಚಿಗೆದ್ದ ರೈತರಿಂದ ಯೋಜನಾ ಕಚೇರಿಗೆ ಮುತ್ತಿಗೆ; ಪೋಲಿಸರ ಮಧ್ಯಪ್ರವೇಶ

04/10/2021, 17:54

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಗ್ರಾಮೀಣ ಪಂಚಾಯಿತಿ ವ್ಯಾಪ್ತಿಯ ರಿ. ಸ ನಂ 839 ಹಾಗೂ ಅಕ್ಕ ಪಕ್ಕದ ಜಮೀನು ಸೇರಿದಂತೆ ಅಂದಾಜು 130 ಎಕರೆ ರೈತರ ಫಲವತ್ತಾದ ಭೂಮಿ ವಶಪಡಿಸಿಕೊಳ್ಳುವ ನೋಟಿಸ್ ಬಂದ ಹಿನ್ನಲೆಯಲ್ಲಿ ಇಲಾಖೆಯ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರೈತರು, ಮಹಿಳೆಯರು ಮತ್ತು ಮಕ್ಕಳು ಹಿಪ್ಪರಗಿ ಅಣೆಕಟ್ಟು ಯೋಜನೆಯ ಕಚೇರಿಗೆ ಮುತ್ತಿಗೆ ಹಾಕಿ ಏಕಾಏಕಿ ಪ್ರತಿಭಟನೆ ನಡೆಸಿದರು.


ನೀರಾವರಿ ಅಧಿಕಾರಿಗಳೊಡನೆ ಮಾತಿನ ಚಕಮಕಿ ನಡೆಸಿ, ಪ್ರತಿಭಟನೆ ತೀವೃಗೊಂಡ ಹಿನ್ನಲೆ, ನೂಕು ನುಗ್ಗಲು ಉಂಟಾಗಿ ಪೋಲಿಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಸಂಗ ಜರುಗಿತು.

ನೆರೆ ಸಂತ್ರಸ್ತರ ಪುನರ್ವಸತಿ ನಿರ್ಮಾಣ ಕೇಂದ್ರಕ್ಕೆ ನಮ್ಮ ಫಲವತ್ತಾದ ಭೂಮಿಯನ್ನು ನಾವು ಬಿಟ್ಟುಕೊಡುವುದಿಲ್ಲ, ಈ ಭೂಮಿಗಳು ಹೋದರೆ ನಾವು ಶಾಶ್ವತವಾಗಿ ಸಂತ್ರಸ್ತ ರಾಗುತ್ತೇವೆ. ನೆರೆ ಸಂತ್ರಸ್ತರಿಗೆ ಬೇರೆಡೆಗೆ ವ್ಯವಸ್ಥೆ  ಮಾಡುವಂತೆ ಅಧಿಕಾರಿಗಳಿಗೆ ಪಟ್ಟು ಹಿಡಿದಿದ್ದರು.


ಈ ವೇಳೆ ಇಲಾಖೆಯ ಆರ್ ಜಿ ರಾಠೋಡ, ಎ ಆರ್ ಖರೋಷಿ, ಪಿಎಸ್ಐ ಕುಮಾರ ಹಾಡಕರ ಸೇರಿದಂತೆ ಅನೇಕ ಪೋಲಿಸರು, ಇಲಾಖೆ ಅಧಿಕಾರಿಗಳು ಹಾಗೂ ಇತರ ರೈತರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು