11:41 PM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಕೃಷಿ ಭೂಮಿ ವಶಕ್ಕೆ ನೋಟಿಸು: ರೊಚ್ಚಿಗೆದ್ದ ರೈತರಿಂದ ಯೋಜನಾ ಕಚೇರಿಗೆ ಮುತ್ತಿಗೆ; ಪೋಲಿಸರ ಮಧ್ಯಪ್ರವೇಶ

04/10/2021, 17:54

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಗ್ರಾಮೀಣ ಪಂಚಾಯಿತಿ ವ್ಯಾಪ್ತಿಯ ರಿ. ಸ ನಂ 839 ಹಾಗೂ ಅಕ್ಕ ಪಕ್ಕದ ಜಮೀನು ಸೇರಿದಂತೆ ಅಂದಾಜು 130 ಎಕರೆ ರೈತರ ಫಲವತ್ತಾದ ಭೂಮಿ ವಶಪಡಿಸಿಕೊಳ್ಳುವ ನೋಟಿಸ್ ಬಂದ ಹಿನ್ನಲೆಯಲ್ಲಿ ಇಲಾಖೆಯ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರೈತರು, ಮಹಿಳೆಯರು ಮತ್ತು ಮಕ್ಕಳು ಹಿಪ್ಪರಗಿ ಅಣೆಕಟ್ಟು ಯೋಜನೆಯ ಕಚೇರಿಗೆ ಮುತ್ತಿಗೆ ಹಾಕಿ ಏಕಾಏಕಿ ಪ್ರತಿಭಟನೆ ನಡೆಸಿದರು.


ನೀರಾವರಿ ಅಧಿಕಾರಿಗಳೊಡನೆ ಮಾತಿನ ಚಕಮಕಿ ನಡೆಸಿ, ಪ್ರತಿಭಟನೆ ತೀವೃಗೊಂಡ ಹಿನ್ನಲೆ, ನೂಕು ನುಗ್ಗಲು ಉಂಟಾಗಿ ಪೋಲಿಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಸಂಗ ಜರುಗಿತು.

ನೆರೆ ಸಂತ್ರಸ್ತರ ಪುನರ್ವಸತಿ ನಿರ್ಮಾಣ ಕೇಂದ್ರಕ್ಕೆ ನಮ್ಮ ಫಲವತ್ತಾದ ಭೂಮಿಯನ್ನು ನಾವು ಬಿಟ್ಟುಕೊಡುವುದಿಲ್ಲ, ಈ ಭೂಮಿಗಳು ಹೋದರೆ ನಾವು ಶಾಶ್ವತವಾಗಿ ಸಂತ್ರಸ್ತ ರಾಗುತ್ತೇವೆ. ನೆರೆ ಸಂತ್ರಸ್ತರಿಗೆ ಬೇರೆಡೆಗೆ ವ್ಯವಸ್ಥೆ  ಮಾಡುವಂತೆ ಅಧಿಕಾರಿಗಳಿಗೆ ಪಟ್ಟು ಹಿಡಿದಿದ್ದರು.


ಈ ವೇಳೆ ಇಲಾಖೆಯ ಆರ್ ಜಿ ರಾಠೋಡ, ಎ ಆರ್ ಖರೋಷಿ, ಪಿಎಸ್ಐ ಕುಮಾರ ಹಾಡಕರ ಸೇರಿದಂತೆ ಅನೇಕ ಪೋಲಿಸರು, ಇಲಾಖೆ ಅಧಿಕಾರಿಗಳು ಹಾಗೂ ಇತರ ರೈತರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು