4:03 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಕೃಷಿ ಭೂಮಿ ವಶಕ್ಕೆ ನೋಟಿಸು: ರೊಚ್ಚಿಗೆದ್ದ ರೈತರಿಂದ ಯೋಜನಾ ಕಚೇರಿಗೆ ಮುತ್ತಿಗೆ; ಪೋಲಿಸರ ಮಧ್ಯಪ್ರವೇಶ

04/10/2021, 17:54

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಗ್ರಾಮೀಣ ಪಂಚಾಯಿತಿ ವ್ಯಾಪ್ತಿಯ ರಿ. ಸ ನಂ 839 ಹಾಗೂ ಅಕ್ಕ ಪಕ್ಕದ ಜಮೀನು ಸೇರಿದಂತೆ ಅಂದಾಜು 130 ಎಕರೆ ರೈತರ ಫಲವತ್ತಾದ ಭೂಮಿ ವಶಪಡಿಸಿಕೊಳ್ಳುವ ನೋಟಿಸ್ ಬಂದ ಹಿನ್ನಲೆಯಲ್ಲಿ ಇಲಾಖೆಯ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರೈತರು, ಮಹಿಳೆಯರು ಮತ್ತು ಮಕ್ಕಳು ಹಿಪ್ಪರಗಿ ಅಣೆಕಟ್ಟು ಯೋಜನೆಯ ಕಚೇರಿಗೆ ಮುತ್ತಿಗೆ ಹಾಕಿ ಏಕಾಏಕಿ ಪ್ರತಿಭಟನೆ ನಡೆಸಿದರು.


ನೀರಾವರಿ ಅಧಿಕಾರಿಗಳೊಡನೆ ಮಾತಿನ ಚಕಮಕಿ ನಡೆಸಿ, ಪ್ರತಿಭಟನೆ ತೀವೃಗೊಂಡ ಹಿನ್ನಲೆ, ನೂಕು ನುಗ್ಗಲು ಉಂಟಾಗಿ ಪೋಲಿಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಸಂಗ ಜರುಗಿತು.

ನೆರೆ ಸಂತ್ರಸ್ತರ ಪುನರ್ವಸತಿ ನಿರ್ಮಾಣ ಕೇಂದ್ರಕ್ಕೆ ನಮ್ಮ ಫಲವತ್ತಾದ ಭೂಮಿಯನ್ನು ನಾವು ಬಿಟ್ಟುಕೊಡುವುದಿಲ್ಲ, ಈ ಭೂಮಿಗಳು ಹೋದರೆ ನಾವು ಶಾಶ್ವತವಾಗಿ ಸಂತ್ರಸ್ತ ರಾಗುತ್ತೇವೆ. ನೆರೆ ಸಂತ್ರಸ್ತರಿಗೆ ಬೇರೆಡೆಗೆ ವ್ಯವಸ್ಥೆ  ಮಾಡುವಂತೆ ಅಧಿಕಾರಿಗಳಿಗೆ ಪಟ್ಟು ಹಿಡಿದಿದ್ದರು.


ಈ ವೇಳೆ ಇಲಾಖೆಯ ಆರ್ ಜಿ ರಾಠೋಡ, ಎ ಆರ್ ಖರೋಷಿ, ಪಿಎಸ್ಐ ಕುಮಾರ ಹಾಡಕರ ಸೇರಿದಂತೆ ಅನೇಕ ಪೋಲಿಸರು, ಇಲಾಖೆ ಅಧಿಕಾರಿಗಳು ಹಾಗೂ ಇತರ ರೈತರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು