11:04 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕೃಷಿ ಭೂಮಿ ವಶಕ್ಕೆ ನೋಟಿಸು: ರೊಚ್ಚಿಗೆದ್ದ ರೈತರಿಂದ ಯೋಜನಾ ಕಚೇರಿಗೆ ಮುತ್ತಿಗೆ; ಪೋಲಿಸರ ಮಧ್ಯಪ್ರವೇಶ

04/10/2021, 17:54

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಗ್ರಾಮೀಣ ಪಂಚಾಯಿತಿ ವ್ಯಾಪ್ತಿಯ ರಿ. ಸ ನಂ 839 ಹಾಗೂ ಅಕ್ಕ ಪಕ್ಕದ ಜಮೀನು ಸೇರಿದಂತೆ ಅಂದಾಜು 130 ಎಕರೆ ರೈತರ ಫಲವತ್ತಾದ ಭೂಮಿ ವಶಪಡಿಸಿಕೊಳ್ಳುವ ನೋಟಿಸ್ ಬಂದ ಹಿನ್ನಲೆಯಲ್ಲಿ ಇಲಾಖೆಯ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರೈತರು, ಮಹಿಳೆಯರು ಮತ್ತು ಮಕ್ಕಳು ಹಿಪ್ಪರಗಿ ಅಣೆಕಟ್ಟು ಯೋಜನೆಯ ಕಚೇರಿಗೆ ಮುತ್ತಿಗೆ ಹಾಕಿ ಏಕಾಏಕಿ ಪ್ರತಿಭಟನೆ ನಡೆಸಿದರು.


ನೀರಾವರಿ ಅಧಿಕಾರಿಗಳೊಡನೆ ಮಾತಿನ ಚಕಮಕಿ ನಡೆಸಿ, ಪ್ರತಿಭಟನೆ ತೀವೃಗೊಂಡ ಹಿನ್ನಲೆ, ನೂಕು ನುಗ್ಗಲು ಉಂಟಾಗಿ ಪೋಲಿಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಸಂಗ ಜರುಗಿತು.

ನೆರೆ ಸಂತ್ರಸ್ತರ ಪುನರ್ವಸತಿ ನಿರ್ಮಾಣ ಕೇಂದ್ರಕ್ಕೆ ನಮ್ಮ ಫಲವತ್ತಾದ ಭೂಮಿಯನ್ನು ನಾವು ಬಿಟ್ಟುಕೊಡುವುದಿಲ್ಲ, ಈ ಭೂಮಿಗಳು ಹೋದರೆ ನಾವು ಶಾಶ್ವತವಾಗಿ ಸಂತ್ರಸ್ತ ರಾಗುತ್ತೇವೆ. ನೆರೆ ಸಂತ್ರಸ್ತರಿಗೆ ಬೇರೆಡೆಗೆ ವ್ಯವಸ್ಥೆ  ಮಾಡುವಂತೆ ಅಧಿಕಾರಿಗಳಿಗೆ ಪಟ್ಟು ಹಿಡಿದಿದ್ದರು.


ಈ ವೇಳೆ ಇಲಾಖೆಯ ಆರ್ ಜಿ ರಾಠೋಡ, ಎ ಆರ್ ಖರೋಷಿ, ಪಿಎಸ್ಐ ಕುಮಾರ ಹಾಡಕರ ಸೇರಿದಂತೆ ಅನೇಕ ಪೋಲಿಸರು, ಇಲಾಖೆ ಅಧಿಕಾರಿಗಳು ಹಾಗೂ ಇತರ ರೈತರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು