11:13 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಹೆಬ್ರಿ ಹೋಬಳಿ ರಚನೆಗೆ ಸಚಿವ ಸಂಪುಟ ಅನುಮೋದನೆ: ಸಚಿವ ವಿ. ಸುನಿಲ್ ಕುಮಾರ್

05/10/2021, 19:08

ಕಾರ್ಕಳ(reporterkarnataka.com) : ಹೆಬ್ರಿ ತಾಲೂಕು ಕಾರ್ಕಳ ತಾಲೂಕಿನಿಂದ ಬೇರ್ಪಟ್ಟು ಪೂರ್ಣ ಪ್ರಮಾಣದ ತಾಲೂಕಾಗಿ ಘೋಷಣೆ ಆಗಿ ವರ್ಷಗಳಾದರೂ ಇಷ್ಟರವರೆಗೆ ಹೋಬಳಿ ಘೋಷಣೆ ಆಗದೇ ಇರುವುದರಿಂದ ಹಲವಾರು ಆಡಳಿತಾತ್ಮಕ ಸಮಸ್ಯೆಗಳು ತಲೆದೋರುತ್ತಿದ್ದು ಈ ನಿಟ್ಟಿನಲ್ಲ ಸಚಿವ ಸುನಿಲ್ ಕುಮಾರ್ ಹೆಬ್ರಿ ಹೋಬಳಿ ರಚನೆ ಮಾಡುವ ಬಗ್ಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಆಗಿರುತ್ತದೆ. 

ಹೆಬ್ರಿ ತಾಲೂಕು ರಚನೆಗೊಂಡು ತಾಲೂಕು ಕಚೇರಿ ಆರಂಭ ಆಗಿದ್ದರೂ ತಾಲೂಕಿನ ಹೆಚ್ಚಿನ ಗ್ರಾಮಗಳು ಅಜೆಕಾರು ಹೋಬಳಿಗೆ ಒಳಗೊಂಡಿತ್ತು. ಹಾಗೂ ಹೆಬ್ರಿ ತಾಲೂಕಿನ ಸಾರ್ವಜನಿಕರು ಕಂದಾಯ ಇಲಾಖೆಯ ಸೇವೆ ಪಡೆಯಲು ಅಜೆಕಾರು ನಾಡ ಕಚೇರಿಗೆ ಬಂದು ಅರ್ಜಿ ಸಲ್ಲಿಸಬೇಕಾಗಿತ್ತು.  ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿತ್ತು ಮತ್ತು ಎರಡೂ ಕಡೆ ಒಬ್ಬರೇ ಕಂದಾಯ ನಿರೀಕ್ಷಕರು ಕರ್ತವ್ಯ ನಿರ್ವಹಿಸಬೇಕಾಗಿತ್ತು. 

ಈ ಎಲ್ಲ ಸಮಸ್ಯೆಗಳನ್ನು ಮನಗಂಡು ಮಾನ್ಯ ಸಚಿವ ವಿ. ಸುನಿಲ್ ಕುಮಾರ್  ಅವರು ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಮನವಿ ಮಾಡಿಕೊಂಡ ಮೇರೆಗೆ ಇಂದು ನಡೆದ ಸಚಿವ ಸಂಪುಟ ಸಭೆಗೆ ಅನುಮೋದನೆಗಾಗಿ ಕಡತ ಹಾಜರುಪಡಿಸಿದ್ದರು.

ಹೋಬಳಿ ರಚನೆ ಬಗ್ಗೆ ಶೀಘ್ರ ಸರ್ಕಾರಿ ಆದೇಶ ಜಾರಿ ಆಗಲಿದ್ದು ತದನಂತರ ಹೆಬ್ರಿ ತಾಲೂಕು ಕೇಂದ್ರದಲ್ಲಿಯೇ ಕಂದಾಯ ಸೇವೆಗಳು ಆರಂಭವಾಗಲಿದ್ದು, ಹೆಬ್ರಿ ಕೇಂದ್ರ ಸ್ಥಾನಕ್ಕೆ ಓರ್ವ ಕಂದಾಯ ನಿರೀಕ್ಷಕರು ಹಾಗೂ ಇನ್ನಿತರ ಹುದ್ದೆಗಳು ಸೃಷ್ಠಿಯಾಗಲಿದೆ. ಇದರಿಂದ ತಾಲೂಕಿನ ಸಾರ್ವಜನಿಕರಿಗೆ ತ್ವರಿತವಾಗಿ ಮತ್ತು ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಸಚಿವರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು