4:22 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಹೆಬ್ರಿ ಹೋಬಳಿ ರಚನೆಗೆ ಸಚಿವ ಸಂಪುಟ ಅನುಮೋದನೆ: ಸಚಿವ ವಿ. ಸುನಿಲ್ ಕುಮಾರ್

05/10/2021, 19:08

ಕಾರ್ಕಳ(reporterkarnataka.com) : ಹೆಬ್ರಿ ತಾಲೂಕು ಕಾರ್ಕಳ ತಾಲೂಕಿನಿಂದ ಬೇರ್ಪಟ್ಟು ಪೂರ್ಣ ಪ್ರಮಾಣದ ತಾಲೂಕಾಗಿ ಘೋಷಣೆ ಆಗಿ ವರ್ಷಗಳಾದರೂ ಇಷ್ಟರವರೆಗೆ ಹೋಬಳಿ ಘೋಷಣೆ ಆಗದೇ ಇರುವುದರಿಂದ ಹಲವಾರು ಆಡಳಿತಾತ್ಮಕ ಸಮಸ್ಯೆಗಳು ತಲೆದೋರುತ್ತಿದ್ದು ಈ ನಿಟ್ಟಿನಲ್ಲ ಸಚಿವ ಸುನಿಲ್ ಕುಮಾರ್ ಹೆಬ್ರಿ ಹೋಬಳಿ ರಚನೆ ಮಾಡುವ ಬಗ್ಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಆಗಿರುತ್ತದೆ. 

ಹೆಬ್ರಿ ತಾಲೂಕು ರಚನೆಗೊಂಡು ತಾಲೂಕು ಕಚೇರಿ ಆರಂಭ ಆಗಿದ್ದರೂ ತಾಲೂಕಿನ ಹೆಚ್ಚಿನ ಗ್ರಾಮಗಳು ಅಜೆಕಾರು ಹೋಬಳಿಗೆ ಒಳಗೊಂಡಿತ್ತು. ಹಾಗೂ ಹೆಬ್ರಿ ತಾಲೂಕಿನ ಸಾರ್ವಜನಿಕರು ಕಂದಾಯ ಇಲಾಖೆಯ ಸೇವೆ ಪಡೆಯಲು ಅಜೆಕಾರು ನಾಡ ಕಚೇರಿಗೆ ಬಂದು ಅರ್ಜಿ ಸಲ್ಲಿಸಬೇಕಾಗಿತ್ತು.  ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿತ್ತು ಮತ್ತು ಎರಡೂ ಕಡೆ ಒಬ್ಬರೇ ಕಂದಾಯ ನಿರೀಕ್ಷಕರು ಕರ್ತವ್ಯ ನಿರ್ವಹಿಸಬೇಕಾಗಿತ್ತು. 

ಈ ಎಲ್ಲ ಸಮಸ್ಯೆಗಳನ್ನು ಮನಗಂಡು ಮಾನ್ಯ ಸಚಿವ ವಿ. ಸುನಿಲ್ ಕುಮಾರ್  ಅವರು ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಮನವಿ ಮಾಡಿಕೊಂಡ ಮೇರೆಗೆ ಇಂದು ನಡೆದ ಸಚಿವ ಸಂಪುಟ ಸಭೆಗೆ ಅನುಮೋದನೆಗಾಗಿ ಕಡತ ಹಾಜರುಪಡಿಸಿದ್ದರು.

ಹೋಬಳಿ ರಚನೆ ಬಗ್ಗೆ ಶೀಘ್ರ ಸರ್ಕಾರಿ ಆದೇಶ ಜಾರಿ ಆಗಲಿದ್ದು ತದನಂತರ ಹೆಬ್ರಿ ತಾಲೂಕು ಕೇಂದ್ರದಲ್ಲಿಯೇ ಕಂದಾಯ ಸೇವೆಗಳು ಆರಂಭವಾಗಲಿದ್ದು, ಹೆಬ್ರಿ ಕೇಂದ್ರ ಸ್ಥಾನಕ್ಕೆ ಓರ್ವ ಕಂದಾಯ ನಿರೀಕ್ಷಕರು ಹಾಗೂ ಇನ್ನಿತರ ಹುದ್ದೆಗಳು ಸೃಷ್ಠಿಯಾಗಲಿದೆ. ಇದರಿಂದ ತಾಲೂಕಿನ ಸಾರ್ವಜನಿಕರಿಗೆ ತ್ವರಿತವಾಗಿ ಮತ್ತು ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಸಚಿವರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು