11:45 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಹೆಬ್ರಿ ಹೋಬಳಿ ರಚನೆಗೆ ಸಚಿವ ಸಂಪುಟ ಅನುಮೋದನೆ: ಸಚಿವ ವಿ. ಸುನಿಲ್ ಕುಮಾರ್

05/10/2021, 19:08

ಕಾರ್ಕಳ(reporterkarnataka.com) : ಹೆಬ್ರಿ ತಾಲೂಕು ಕಾರ್ಕಳ ತಾಲೂಕಿನಿಂದ ಬೇರ್ಪಟ್ಟು ಪೂರ್ಣ ಪ್ರಮಾಣದ ತಾಲೂಕಾಗಿ ಘೋಷಣೆ ಆಗಿ ವರ್ಷಗಳಾದರೂ ಇಷ್ಟರವರೆಗೆ ಹೋಬಳಿ ಘೋಷಣೆ ಆಗದೇ ಇರುವುದರಿಂದ ಹಲವಾರು ಆಡಳಿತಾತ್ಮಕ ಸಮಸ್ಯೆಗಳು ತಲೆದೋರುತ್ತಿದ್ದು ಈ ನಿಟ್ಟಿನಲ್ಲ ಸಚಿವ ಸುನಿಲ್ ಕುಮಾರ್ ಹೆಬ್ರಿ ಹೋಬಳಿ ರಚನೆ ಮಾಡುವ ಬಗ್ಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಆಗಿರುತ್ತದೆ. 

ಹೆಬ್ರಿ ತಾಲೂಕು ರಚನೆಗೊಂಡು ತಾಲೂಕು ಕಚೇರಿ ಆರಂಭ ಆಗಿದ್ದರೂ ತಾಲೂಕಿನ ಹೆಚ್ಚಿನ ಗ್ರಾಮಗಳು ಅಜೆಕಾರು ಹೋಬಳಿಗೆ ಒಳಗೊಂಡಿತ್ತು. ಹಾಗೂ ಹೆಬ್ರಿ ತಾಲೂಕಿನ ಸಾರ್ವಜನಿಕರು ಕಂದಾಯ ಇಲಾಖೆಯ ಸೇವೆ ಪಡೆಯಲು ಅಜೆಕಾರು ನಾಡ ಕಚೇರಿಗೆ ಬಂದು ಅರ್ಜಿ ಸಲ್ಲಿಸಬೇಕಾಗಿತ್ತು.  ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿತ್ತು ಮತ್ತು ಎರಡೂ ಕಡೆ ಒಬ್ಬರೇ ಕಂದಾಯ ನಿರೀಕ್ಷಕರು ಕರ್ತವ್ಯ ನಿರ್ವಹಿಸಬೇಕಾಗಿತ್ತು. 

ಈ ಎಲ್ಲ ಸಮಸ್ಯೆಗಳನ್ನು ಮನಗಂಡು ಮಾನ್ಯ ಸಚಿವ ವಿ. ಸುನಿಲ್ ಕುಮಾರ್  ಅವರು ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಮನವಿ ಮಾಡಿಕೊಂಡ ಮೇರೆಗೆ ಇಂದು ನಡೆದ ಸಚಿವ ಸಂಪುಟ ಸಭೆಗೆ ಅನುಮೋದನೆಗಾಗಿ ಕಡತ ಹಾಜರುಪಡಿಸಿದ್ದರು.

ಹೋಬಳಿ ರಚನೆ ಬಗ್ಗೆ ಶೀಘ್ರ ಸರ್ಕಾರಿ ಆದೇಶ ಜಾರಿ ಆಗಲಿದ್ದು ತದನಂತರ ಹೆಬ್ರಿ ತಾಲೂಕು ಕೇಂದ್ರದಲ್ಲಿಯೇ ಕಂದಾಯ ಸೇವೆಗಳು ಆರಂಭವಾಗಲಿದ್ದು, ಹೆಬ್ರಿ ಕೇಂದ್ರ ಸ್ಥಾನಕ್ಕೆ ಓರ್ವ ಕಂದಾಯ ನಿರೀಕ್ಷಕರು ಹಾಗೂ ಇನ್ನಿತರ ಹುದ್ದೆಗಳು ಸೃಷ್ಠಿಯಾಗಲಿದೆ. ಇದರಿಂದ ತಾಲೂಕಿನ ಸಾರ್ವಜನಿಕರಿಗೆ ತ್ವರಿತವಾಗಿ ಮತ್ತು ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಸಚಿವರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು