4:32 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಗುರು ಪರಂಪರೆಗೆ ಪ್ರಸಿದ್ಧವಾದ ಮಖಣಾಪುರದ ಶ್ರೀ ಸಿದ್ದಜ್ಯೋತಿ ಆಶ್ರಮ: ಭಕ್ತರಿಗೆ ಸಿಗಲಿದೆ ಅನ್ನ ದಾಸೋಹ

06/10/2021, 16:29

ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ

info.reporterkarnataka@gmail.com

ವಿಜಯಪುರ ಜಿಲ್ಲೆಯ ಮಖಣಾಪುರದ ಶ್ರೀ ಸಿದ್ದಜ್ಯೋತಿ ಮಠದ ಸ್ವಾಮಿಗಳ ಸೇವಾ ಸಮಿತಿ ಸಹಯೋಗದಲ್ಲಿ ನಡೆಯುವ ಶ್ರೀ ಸಿದ್ಧಲಿಂಗ ಆಶ್ರಮವು ಅನ್ನದಾಸೋಹಕ್ಕೆ ಇಡೀ ಉತ್ತರ ಕರ್ನಾಟಕದಲ್ಲೇ ಪ್ರಸಿದ್ಧಿ ಪಡೆದಿದೆ. ಆಶ್ರಮದ ಗುರುಗಳಾದ ಶ್ರೀ ದೇವೇಂದ್ರ ಒಡೆಯರ್ ಅವರು ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಆಶ್ರಮದಲ್ಲಿ ಸಕಲ ವ್ಯವಸ್ಥೆಯನ್ನು ಮಾಡಿದ್ದಾರೆ. 

ಈ ಆಶ್ರಮವು 1700 ಮಠ ಮುನಿಗಳನ್ನು ಹೊಂದಿದ ಭವ್ಯ ಪರಂಪರೆಯಿಂದ ಬಂದಿದೆ. ಇದೀಗ ಗುರುಗಳು ಇಲ್ಲಿನ ಅನ್ನದಾಸೋಹದ ಮುಂದಾಳತ್ವ ವಹಿಸಿದ್ದಾರೆ. ಆರೋಗ್ಯ ಭಾಗ್ಯ, ಸಂತಾನ ಭಾಗ್ಯಕ್ಕಾಗಿ ಉತ್ತರ ಕರ್ನಾಟಕ ಹಾಗೂ ನೆರೆಯ ಆಂಧ್ರ ಪ್ರದೇಶದಿಂದ ಸಾವಿರಾರು ಭಕ್ತರು ಇಲ್ಲಿಗೆ ಹರಕೆ ಹೊತ್ತುಕೊಳ್ಳುತ್ತಾರೆ. ಗುರುಗಳು ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ಭಕ್ತರ ಉದ್ದಾರದಲ್ಲಿ ನಿರತರಾಗಿದ್ದಾರೆ.

ಇದರೊಂದಿಗೆ 4 ಎಕರೆ ಜಾಗದಲ್ಲಿ 108 ಅಡಿ ಎತ್ತರದ ಶಿವಲಿಂಗ ನಿರ್ಮಾಣದ ಸಂಕಲ್ಪವನ್ನು ಗುರುಗಳು ಕೈಗೊಂಡಿದ್ದಾರೆ. ಇದರ ಜತೆ ವೃದ್ದಾಶ್ರಮವೂ ತಲೆ ಎತ್ತಲಿದೆ. ಈ ಮಹಾನ್ ಕಾರ್ಯಕ್ಕೆ ಆಶ್ರಮದ ಸದಸ್ಯರು ಹಾಗು ಸುತ್ತಮುತ್ತಲಿನ ಗ್ರಾಮದ ಭಕ್ತರು, ರಾಜ್ಯ ಮತ್ತು ದೇಶದ ಮೂಲೆ ಮೂಲೆಯ ಶಿವಭಕ್ತರು ನೆರವಿನ ಹಸ್ತದೊಂದಿಗೆ ಪಾಲ್ಗೊಳ್ಳುವ ಅಗತ್ಯವಿದೆ. ಭಕ್ತರು ಈ ಬೃಹತ್  ಶಿವಲಿಂಗ ನಿರ್ಮಾಣ ಕಾರ್ಯದಲ್ಲಿ ತನು- ಮನ- ಧನದಿಂದ ಸಹಾಯ ಮಾಡಿ ಪುನಿತರಾಗಬೇಕು ಎಂದು ಆಶ್ರಮದ ಗುರುಗಳು ಹಾಗೂ ಸದಸ್ಯರು ವಿನಂತಿಸಿಕೊಂಡಿದ್ದಾರೆ.

ಶಿವಲಿಂಗ ನಿರ್ಮಾಣದ ಜತೆಗೆ ಅಸಹಾಯಕ, ನಿರ್ಗತಿಕ ವೃದ್ಧರಿಗೆ ಸಹಾಯವಾಗುವ ನಿಟ್ಟಿನಲ್ಲಿ ವೃದ್ದಾಶ್ರಮ ನಿರ್ಮಾಣ ಮಾಡುವ ಸಂಕಲ್ಪ ಕೂಡ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು