11:18 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಫೀಸಿಗಾಗಿ ಬಾಯಿಬಿಟ್ಟ ಖಾಸಗಿ ಕಾಲೇಜು : ಕಿರುಕುಳ ತಾಳಲಾರದೆ ಕೊಲಾಸೋ ನರ್ಸಿಂಗ್‌ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

06/10/2021, 17:53

ಮಂಗಳೂರು(reporterkarnatka.com): ಕಾಲೇಜು ಶುಲ್ಕ ಪಾವತಿಸುವಂತೆ ಆಡಳಿತ ಮಂಡಳಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಬಿಎಸ್ಸಿ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ. 

ನಗರದ ಕದ್ರಿಯಲ್ಲಿರುವ ಕೊಲಾಸೋ ನರ್ಸಿಂಗ್‌ ಕಾಲೇಜಿನ ಹಾಸ್ಟೆಲ್‌ನಲ್ಲಿ ನೀನಾ ಸತೀಶ್‌ ( 19) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕದ್ರಿಯಲ್ಲಿರುವ ಕಾಲೇಜಿನ ಹಾಸ್ಟೇಲ್‌ನ ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಸರಗೋಡು ಮೂಲದ ನೀನಾ ಅವರು ನಗರದ ಕೊಲಾಸೋ ನರ್ಸಿಂಗ್‌ ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿ ನರ್ಸಿಂಗ್‌ ವಿದ್ಯಾಭ್ಯಾಸವನ್ನು ಮಾಡುತ್ತಿದ್ದರು. ನರ್ಸಿಂಗ್‌ ವಿದ್ಯಾಭ್ಯಾಸಕ್ಕಾಗಿ ಕಾಲೇಜಿಗೆ 75 ಸಾವಿರ ರೂಪಾಯಿ ಫೀಸ್‌ 

ಪಾವತಿಸಿದ್ದರು. ಉಳಿದ ಹಣವನ್ನು ಪಾವತಿ ಮಾಡುವಂತೆ ಕಾಲೇಜಿನ ಆಡಳಿತ ಮಂಡಳಿ ಕೇಳುತ್ತಿದೆ. ಹಣ ಪಾವತಿ ಮಾಡದಿದ್ದರೆ ಯೂನಿಫಾರ್ಮ ನೀಡುವುದಿಲ್ಲ ಎಂದು ಬೆದರಿಕೆಯೊಡ್ಡಿದೆ. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ನೀನಾ ಅವರು ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಕೊಲಾಸೋ ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿ ನರ್ಸಿಂಗ್‌ಗೆ 1.25 ಲಕ್ಷ ರೂಪಾಯಿ ಶುಲ್ಕ ಪಾವತಿ ಮಾಡಬೇಕಾಗಿತ್ತು. ನೀನಾ 75 ಸಾವಿರ ಪಾವತಿ ಮಾಡಿದ್ದರು. ತಾಯಿ ಕೂಲಿ ಕೆಲಸ ಮಾಡಿ ಮಗಳಿಗೆ

ವಿದ್ಯಾಭ್ಯಾಸ ಮಾಡಿಸುತ್ತಿರುವುದರಿಂದ ನೀನಾಗೆ ಉಳಿದ 50 ಸಾವಿರ ರೂ. ಶುಲ್ಕ ಸಕಾಲದಲ್ಲಿ ಪಾತಿಸಲು ಸಾಧ್ಯವಾಗಲಿಲ್ಲ. ಕೊರೊನಾದ ಕಷ್ಟ ಕಾಲದಲ್ಲಿಯೂ ಕಾಲೇಜು ಆಡಳಿತ ಮಂಡಳಿ ಶುಲ್ಕ ಭರಿಸುವಂತೆ ವಿದ್ಯಾರ್ಥಿನಿಗೆ ಒತ್ತಡ ಹೇರಿದೆ.

ಫೀಸು ತುಂಬುವಂತೆ ಯಾವುದೇ ಶಾಲಾ-ಕಾಲೇಜುಗಳು ವಿದ್ಯಾರ್ಥಿಗಳಿಗೆ, ಪೋಷಕರಿಗೆ ಒತ್ತಡ ಹೇರಬಾರದು ಎಂದು ಜಿಲ್ಲಾಧಿಕಾರಿ ಈಗಾಗಲೇ ಆದೇಶ ಕೂಡ ಹೊರಡಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು