10:17 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕಾರ್ಕಳ: ಜಲಜೀವನ್ ಮಿಷನ್ ನಡಿ ಕುಡಿಯುವ ನೀರು;  53.32 ಕೋಟಿ ರೂ.ಗಳ ಯೋಜನೆ ತಯಾರಿ

06/10/2021, 17:56

ಕಾರ್ಕಳ(reporterkarnataka.com):
ಕಾರ್ಕಳ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಎಲ್ಲ ಗ್ರಾಮೀಣ ಭಾಗದ ಜನವಸತಿ ಪ್ರದೇಶದ ಕುಟುಂಬಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ಕಾರ್ಯಾತ್ಮಕ ನಳ್ಳಿ ನೀರಿನ ಸಂಪರ್ಕ ಒದಗಿಸಿ ಪ್ರತಿ ಸದಸ್ಯನಿಗೆ ದಿನಕ್ಕೆ 55 ಲೀಟರ್ ಶುದ್ಧ ಕುಡಿಯುವ ನೀರನ್ನು ಒದಗಿಸುವ ಯೋಜನೆಯನ್ನು ಹೊಂದಲಾಗಿದ್ದು, ಒಟ್ಟು 53.32 ಕೋಟಿ ರೂ.ಗಳ ಯೋಜನೆ ರೂಪಿಸಲಾಗಿದೆ.

ಕಾರ್ಕಳ ತಾಲೂಕಿನಲ್ಲಿ 150 ಕಾಮಗಾರಿಗಳನ್ನು ಮತ್ತು ಹೆಬ್ರಿ ತಾಲೂಕಿನಲ್ಲಿ 48 ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಯೋಜನೆಯಡಿ ಒಟ್ಟು 34 ಗ್ರಾಮ ಪಂಚಾಯತ್‌ಗಳ 504 ಜನವಸತಿ ಪ್ರದೇಶಗಳಿಗೆ ನೀರಿನ ಸಂಪರ್ಕ ಒದಗಿಸಲು ಕಾರ್ಕಳ ತಾಲೂಕಿನಲ್ಲಿ 150 ಕಾಮಗಾರಿಗಳನ್ನು ಮತ್ತು ಹೆಬ್ರಿ ತಾಲೂಕಿನಲ್ಲಿ 48 ಕಾಮಗಾರಿಗಳನ್ನು ಕೈಗೊಳ್ಳಲು ಅಂದಾಜು ಮೊತ್ತ ರೂ. 53.32 ಕೋಟಿಗಳಿಗೆ ಯೋಜನೆ ರೂಪಿಸಲಾಗಿದೆ. ಕಾಮಗಾರಿಗಳಲ್ಲಿ ಒಟ್ಟು 133 ಕೊಳವಿ ಬಾವಿಗಳು 92 ಮೇಲ್ಮಟ್ಟದ ಟ್ಯಾಂಕ್ ಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸಲಾಗಿದೆ. 

198 ಕಾಮಗಾರಿಗಳ ಪೈಕಿ 14 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, 137 ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುತ್ತವೆ ಹಾಗೂ 64 ಮೇಲ್ಮಟ್ಟದ ಟ್ಯಾಂಕ್ ಗಳು ಪ್ರಗತಿಯಲ್ಲಿರುತ್ತದೆ. ಬಾಕಿ ಉಳಿದ ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯ ಹಂತದಲ್ಲಿರುತ್ತದೆ. 

ಇತ್ತೀಚಿನ ದಿನಗಳಲ್ಲಿ ಕೊಳವೆ ಬಾವಿಗಳಲ್ಲಿನ ನೀರಿನ ಲಭ್ಯತೆಯು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ವಾರಾಹಿ ನದಿಯ ಶಾಶ್ವತ ಜಲ ಮೂಲದಿಂದ ನೀರನ್ನು ಪಡೆದು ಕಾರ್ಕಳ ಕ್ಷೇತ್ರದ ಉಭಯ ತಾಲೂಕಿನ ಎಲ್ಲ ಜನವಸತಿಗಳಲ್ಲಿರುವ ಪ್ರತಿಯೊಬ್ಬರಿಗೂ ದಿನಕ್ಕೆ ತಲಾ 55 ಲೀಟರ್ ಶುದ್ಧ ಕುಡಿಯುವ ನೀರನ್ನು ಮುಂದಿನ 30 ವರ್ಷಗಳವರೆಗೆ ಸರಬರಾಜು ಮಾಡಲು ಅಂದಾಜು ರೂ.600.00 ಕೋಟಿಗೂ ಅಧಿಕ ಮೊತ್ತದ  ಶಾಶ್ವತ ಕುಡಿಯುವ ನೀರು ಸರಬರಾಜು ಯೋಜನೆಯನ್ನು ರೂಪಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು