8:57 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರು ಶೂಟ್ ಔಟ್: ಅಪ್ಪ ಹಾರಿಸಿದ ಗುಂಡು ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಪುತ್ರ ಸಾವು

06/10/2021, 19:04

ಮಂಗಳೂರು(reporterkarnataka.com) : ನಗರದ ಮೋರ್ಗನ್ ಗೇಟ್ ನ ವೈಷ್ಣವಿ ಎಕ್ಸ್ ಪ್ರೆ ಸ್ ಕಾರ್ಗೋ ಪ್ರೈ.ಲಿ. ಸಂಸ್ಥೆಯ ಮಾಲೀಕ ರಾಜೇಶ್ ಪ್ರಭು ತನ್ನ ಕೆಲಸದವರಿಗೆ ಹಾರಿಸಿದ ಗುಂಡು ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಅವರ ಪುತ್ರ ಚಿಕಿತ್ಸೆ ಫಲಕಾರಿಯಾಗದೆ ಇಂದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಮಂಗಳವಾರ ಸಂಬಳ ಕೇಳಲು ಬಂದಿದ್ದ ನೌಕರರ ಮೇಲೆ ಸಿಟ್ಟಿಗೆದ್ದ ರಾಜೇಶ್ ಪ್ರಭು ತನ್ನ ಬಳಿ ಇದ್ದ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದರು. ಅದು ತಪ್ಪಿ ಅವರ 16ರ ಹರೆಯದ ಪುತ್ರ ಸುಧೀಂದ್ರನ ತಲೆಗೆ ಬಿದ್ದಿತ್ತು. ಕಣ್ಣಿನೊಳಗಿನಿಂದ ಪ್ರವೇಶಿಸಿದ ಗುಂಡು ಮೆದುಳು ಹೊಕ್ಕಿತ್ತು. ಬಾಲಕನನ್ನು ತಕ್ಷಣ ಖಾಸಗಿ ಆಸ್ಪತ್ರೆಯೊಂದಕ್ಕೆ ಸೇರಿಸಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಇಂದು ಮೃತಪಟ್ಟಿದ್ದಾನೆ. ಆರೋಪಿ ತಂದೆ ರಾಜೇಶ್ ಪ್ರಭು ಅವರನ್ನು ಬಂಧಿಸಲಾಗಿದೆ.

ನಗರದ ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದರು. ಪೊಲೀಸ್ ಕಮಿಷನರ್ ಶಶಿಕುಮಾರ್ ಕೂಡ ಸ್ಥಳಕ್ಕೆ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು