11:46 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಮಲ್ಪೆ ಮೀನು ಲಾರಿ ಡ್ರೈವರ್ ಅಪಹರಣ ಪ್ರಕರಣ ಸುಖಾಂತ್ಯ: ತಿರುವನಂತಪುರದಿಂದ ಚಾಲಕನ ಕರೆದು ತಂದ ಪೊಲೀಸರು

06/10/2021, 19:20

ಮಲ್ಪೆ(reporterkarnataka.com): ಕೆಲವು ದಿನಗಳ ಹಿಂದೆ ಮಲ್ಪೆಯಲ್ಲಿ ನಡೆದ ಮೀನು ಟ್ರಕ್ ಚಾಲಕನ ಅಪಹರಣ ಪ್ರಕರಣ ಸುಖಾಂತ್ಯಗೊಂಡಿದೆ. ಪೊಲೀಸರು ಅಪಹರಣಗೊಂಡ ಚಾಲಕನನ್ನು ಪತ್ತೆ ಹಚ್ಚಿ ತಿರುವನಂತಪುರದಿಂದ ವಾಪಸ್ ಕರೆ ತಂದಿದ್ದಾರೆ.

ಘಟನೆ ವಿವರ: ಮೀನು ವ್ಯಾಪಾರಿಯೊಬ್ಬರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಉಡುಪಿಯ ಮಲ್ಪೆಯಲ್ಲಿ ನಡೆದಿತ್ತು. ಈ ಕುರಿತು ಸಾಧಿಕ್ ಎಂಬವವರು ದೂರು ನೀಡಿದ್ದರು.
ಚಿಕ್ಕಮಗಳೂರಿನ ಕೊಪ್ಪದಿಂದ ತಮ್ಮನಾದ ಸುಲೈಮಾನ್ ಎಂಬವರು ಮೀನು ಲಾರಿಯ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಸೆ.30 ರಂದು ಬೆಳಿಗ್ಗೆ 9. 00 ಗಂಟೆಗೆ ಕೊಪ್ಪದ ಮನೆಯಿಂದ ಮಲ್ಪೆಗೆ ಮೀನು ಲಾರಿಯ ಚಾಲಕ ಕೆಲಸಕ್ಕೆ ಬಂದಿದ್ದ. ಅ.1ರಂದು ಇನ್ನೊಬ್ಬ ತಮ್ಮನಾದ ಶಂಶುದ್ದೀನ್ ಎಂಬಾತ ಸುಲೈ ಮಾನ್ ಗೆ ಕರೆ ಮಾಡಿದಾಗ ಪೋನ್ ಕರೆ ಸ್ವೀಕರಿಸಲಿಲ್ಲ.

ಸೆ.2ರಂದು ಬೆಳಗ್ಗೆ 9.00 ಗಂಟೆಗೆ ಸುಲೈಮಾನ್ ನ ಮೊಬೈಲ್ ನಂಬ್ರದಿಂದ ಶಂಶುದ್ದೀನ್ ಗೆ ಕರೆ ಬಂದಿತ್ತು. ಆ ಕಡೆಯಿಂದ ಸಮೀರ್ ಎಂಬವನು ಮಾತನಾಡಿ ಸುಲೈ ಮಾನ್ ನಮ್ಮ ಜೊತೆಗೆ ಇದ್ದಾನೆ. ಆತನನ್ನು ಬಿಡಬೇಕಾದರೆ ನಮಗೆ 15 ಲಕ್ಷ ಕೊಡಬೇಕು.

ಆತನನ್ನು ಸೆ.1 ರಂದು ಮಲ್ಪೆಯಿಂದ ನಾವು ಅಪಹರಣ ಮಾಡಿದ್ದೇವೆ ಎಂದು ತಿಳಿಸಿದ್ದನು.ನಂತರ ಸುಲೈಮಾನ್ ಸಂಬಂಧಿಕರು ಮಲ್ಪೆಗೆ ಬಂದು ಆತನ ಬಗ್ಗೆ ವಿಚಾರಿಸಿದ್ದರು. ಸುಲೈಮಾನ್ ಮೀನು ಲಾರಿಯ ಚಾಲಕ ಕೆಲಸದ ಜೊತೆಗೆ ಮೀನನ್ನು ಮಲ್ಪೆಯಲ್ಲಿ ತೆಗೆದುಕೊಂಡು ಕೇರಳಕ್ಕೆ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ವಿಷಯ ತಿಳಿದು ಬಂದಿತ್ತು.

ನಂತರ  ಸುಲೈಮಾನ್ ಮೊಬೈಲಿಗೆ ಕರೆ ಮಾಡಿದಾಗ ಕರೆಯನ್ನು ಸಮೀರ್ ಎಂಬವನು ಸ್ವೀಕರಿಸಿ ನಮಗೆ ಸುಲೈಮಾನ್ ಮೀನು ವ್ಯವಹಾರದಲ್ಲಿ  15 ಲಕ್ಷ ಹಣ ಕೊಡಬೇಕು.  ಆ ಕಾರಣದಿಂದ ಅವನನ್ನು ಕೇರಳದ ಹನಸ್ ಮತ್ತು ಅವರ ಸಹೋದರರು  ಅಪಹರಿಸಿದ್ದಾರೆ. ನೀವು ಬಂದು 15 ಲಕ್ಷ ಹಣ ಕೊಟ್ಟು ಕರೆದುಕೊಂಡು ಹೋಗಿ, ಇಲ್ಲದಿದ್ದರೆ ಆತನನ್ನು ಕೊಂದು ಸಮುದ್ರಕ್ಕೆ ಬಿಸಾಡುತ್ತೇವೆ ಎಂದು ಬೆದರಿಕೆ ಹಾಕಿದ್ದನು. ಈ ಕುರಿತು ಸಾದಿಕ್ ಮಲ್ಪೆ ಠಾಣೆಗೆ ದೂರು ನೀಡಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು