5:36 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಮಲ್ಪೆ: ಸಮುದ್ರದಲ್ಲಿ ನೀರಾಟವಾಡುತ್ತಿದ್ದಾಗ ಮುಳುಗಿ ತುಮಕೂರಿನ ಯುವಕ ಮೃತ್ಯು; ಇನ್ನಿಬ್ಬರ ರಕ್ಷಣೆ

06/10/2021, 23:24

ಉಡುಪಿ(reporterkarnataka.com): ಮಲ್ಪೆ ಕಡಲ ತೀರದಲ್ಲಿ ನೀರಿನಲ್ಲಿ ಆಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಬುಧವಾದ ನಡೆದಿದೆ.

ತುಮಕೂರಿನ ಅತ್ತರ್(23) ಎಂಬಾತ ಮೃತಪಟ್ಟ ಯುವಕ. ಬುಧವಾರ ಮಧ್ಯಾಹ್ನ 12. 00 ಗಂಟೆಗೆ ಮಲ್ಪೆ ಬೀಚ್ ಗೆ ಬಂದು ಮಧ್ಯಾಹ್ನ 2.00 ಗಂಟೆಗೆ ಸಲೀಂ, ಸಲ್ಮಾನ್, ಇಲಿಯಾಸ್, ಅರ್ಬಾಸ್, ಅತ್ತರ್, ಸುಹೇಲ್ ಅವರು  ನೀರಿನಲ್ಲಿ  ಆಟವಾಡಲು  ಸಮುದ್ರಕ್ಕೆ ಇಳಿದಿದ್ದಾರೆ. ಸಮುದ್ರದ ಅಲೆಗಳ ಅಬ್ಬರಕ್ಕೆ ಸಲ್ಮಾನ್, ಅರ್ಬಾಸ್, ಅತ್ತರ್ ನೀರಿನಲ್ಲಿ ಮುಳುಗಿದ್ದು, ಆ ಪೈಕಿ ಸಲ್ಮಾನ್ ಮತ್ತು ಅರ್ಬಾಸ್ ನನ್ನು ಮಲ್ಪೆ ಬೀಚ್ ನ ಟೂರಿಸ್ಟ್ ಬೋಟ್ ನವರು ರಕ್ಷಣೆ ಮಾಡಿದ್ದಾರೆ.

ಆದರೆ  ಅತ್ತರ್ ನೀರಿನಲ್ಲಿ ಮುಳುಗಿ ಕಾಣೆಯಾಗಿದ್ದು, ಮಧ್ಯಾಹ್ನ 3:00 ಗಂಟೆಗೆ ಅತ್ತರ್ ಮೃತದೇಹ ದೊರಕಿದೆ. ಅತ್ತರ್ ಮಲ್ಪೆ ಬೀಚ್ ನಲ್ಲಿ ಸಮುದ್ರದ ನೀರಿನಲ್ಲಿ ಆಟವಾಡುತ್ತಿರುವಾಗ ನೀರಿನ ಅಬ್ಬರಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು