7:50 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಮಲ್ಪೆ: ಸಮುದ್ರದಲ್ಲಿ ನೀರಾಟವಾಡುತ್ತಿದ್ದಾಗ ಮುಳುಗಿ ತುಮಕೂರಿನ ಯುವಕ ಮೃತ್ಯು; ಇನ್ನಿಬ್ಬರ ರಕ್ಷಣೆ

06/10/2021, 23:24

ಉಡುಪಿ(reporterkarnataka.com): ಮಲ್ಪೆ ಕಡಲ ತೀರದಲ್ಲಿ ನೀರಿನಲ್ಲಿ ಆಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಬುಧವಾದ ನಡೆದಿದೆ.

ತುಮಕೂರಿನ ಅತ್ತರ್(23) ಎಂಬಾತ ಮೃತಪಟ್ಟ ಯುವಕ. ಬುಧವಾರ ಮಧ್ಯಾಹ್ನ 12. 00 ಗಂಟೆಗೆ ಮಲ್ಪೆ ಬೀಚ್ ಗೆ ಬಂದು ಮಧ್ಯಾಹ್ನ 2.00 ಗಂಟೆಗೆ ಸಲೀಂ, ಸಲ್ಮಾನ್, ಇಲಿಯಾಸ್, ಅರ್ಬಾಸ್, ಅತ್ತರ್, ಸುಹೇಲ್ ಅವರು  ನೀರಿನಲ್ಲಿ  ಆಟವಾಡಲು  ಸಮುದ್ರಕ್ಕೆ ಇಳಿದಿದ್ದಾರೆ. ಸಮುದ್ರದ ಅಲೆಗಳ ಅಬ್ಬರಕ್ಕೆ ಸಲ್ಮಾನ್, ಅರ್ಬಾಸ್, ಅತ್ತರ್ ನೀರಿನಲ್ಲಿ ಮುಳುಗಿದ್ದು, ಆ ಪೈಕಿ ಸಲ್ಮಾನ್ ಮತ್ತು ಅರ್ಬಾಸ್ ನನ್ನು ಮಲ್ಪೆ ಬೀಚ್ ನ ಟೂರಿಸ್ಟ್ ಬೋಟ್ ನವರು ರಕ್ಷಣೆ ಮಾಡಿದ್ದಾರೆ.

ಆದರೆ  ಅತ್ತರ್ ನೀರಿನಲ್ಲಿ ಮುಳುಗಿ ಕಾಣೆಯಾಗಿದ್ದು, ಮಧ್ಯಾಹ್ನ 3:00 ಗಂಟೆಗೆ ಅತ್ತರ್ ಮೃತದೇಹ ದೊರಕಿದೆ. ಅತ್ತರ್ ಮಲ್ಪೆ ಬೀಚ್ ನಲ್ಲಿ ಸಮುದ್ರದ ನೀರಿನಲ್ಲಿ ಆಟವಾಡುತ್ತಿರುವಾಗ ನೀರಿನ ಅಬ್ಬರಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು