11:58 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ನೀರಾವರಿ ಇಲಾಖೆ 2 ಸಾವಿರ ಕೋಟಿ ಅವ್ಯವಹಾರ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ಆಪ್ತನ ಮನೆ ಸೇರಿದಂತೆ 50 ಕಡೆಗಳಲ್ಲಿ ಐಟಿ ದಾಳಿ

07/10/2021, 13:00

ಬೆಂಗಳೂರು(reporterkarnataka.com) : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್‌ ಅವರ ನಗರದ

ಬಾಷ್ಯಂ ಸರ್ಕಲ್‌ನಲ್ಲಿರುವ ಮನೆಯ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 50 ಕಡೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಬಾಷ್ಯಂ ಸರ್ಕಲ್‌ನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಉಮೇಶ್‌ ವಾಸವಾಗಿದ್ದರು. ಐಟಿ ದಾಳಿಯ ವೇಳೆಯಲ್ಲಿ ಉಮೇಶ್‌ ಮನೆಯಲ್ಲಿದ್ದರು ಎಂಬ ಮಾಹಿತಿ ಇದೆ.

ಉಮೇಶ್‌ ಅವರು ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆಯೂ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಬಿಎಂಟಿಸಿಯಲ್ಲಿ ಡ್ರೈವರ್‌/ ಕಂಡಕ್ಟರ್‌ ಆಗಿದ್ದ ಉಮೇಶ್‌ ಡೆಪ್ಯುಟೇಷನ್‌ ಆಧಾರದ ಮೇಲೆ ಯಡಿಯೂರಪ್ಪ ಅವರ ಆಪ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಯಡಿಯೂರಪ್ಪ ಪ್ರತಿಪಕ್ಷದ ನಾಯಕರಾಗಿದ್ದಾಗಲೂ ಸೇವೆ ಸಲ್ಲಿಸಿದ್ದರು.

ಯಡಿಯೂರಪ್ಪ ಅವರ ಆಡಳಿತ ಕಾಲದಲ್ಲಿ ನೀರಾವರಿ ಇಲಾಖೆಯಲ್ಲಿ ಸುಮಾರು 2 ಎರಡು ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ನೀರಾವರಿ ಇಲಾಖೆಯ ಟೆಂಡರ್‌, ಬಿಲ್‌ ಪಾಸ್‌ ಮಾಡಿರುವುದಕ್ಕೆ ಸಂಬಂಧಿಸಿದಂತೆ ಎಲ್ಲಾ ವ್ಯವಹಾರಗಳನ್ನೂ ಉಮೇಶ್‌ ಅವರೇ ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಉಮೇಶ್‌ ಅವರು ಗುತ್ತಿಗೆದಾರರು ಸಿಮೆಂಟ್‌ ಡೀಲರ್‌ ಗಳ ಸಂಪರ್ಕ ಹೊಂದಿದ್ದರು. ಚಾರ್ಟೆಡ್‌ ಅಕೌಂಟೆಂಟ್‌ಗಳು ಜೊತೆಗೆ ಸಂಪರ್ಕ ಟ್ಯಾಕ್ಸ್‌ ವಂಚನೆ ನಡೆಸಿರುವ ಆರೋಪ ಕೇಳಿ ಬಂದಿದೆ.‌ ಈ ಕುರಿತು ತನಿಖೆಯಿಂದಲೇ ಹೆಚ್ಚಿನ ವಿವರ ತಿಳಿದು ಬರಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು