10:57 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ನೀರಾವರಿ ಇಲಾಖೆ 2 ಸಾವಿರ ಕೋಟಿ ಅವ್ಯವಹಾರ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ಆಪ್ತನ ಮನೆ ಸೇರಿದಂತೆ 50 ಕಡೆಗಳಲ್ಲಿ ಐಟಿ ದಾಳಿ

07/10/2021, 13:00

ಬೆಂಗಳೂರು(reporterkarnataka.com) : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್‌ ಅವರ ನಗರದ

ಬಾಷ್ಯಂ ಸರ್ಕಲ್‌ನಲ್ಲಿರುವ ಮನೆಯ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 50 ಕಡೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಬಾಷ್ಯಂ ಸರ್ಕಲ್‌ನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಉಮೇಶ್‌ ವಾಸವಾಗಿದ್ದರು. ಐಟಿ ದಾಳಿಯ ವೇಳೆಯಲ್ಲಿ ಉಮೇಶ್‌ ಮನೆಯಲ್ಲಿದ್ದರು ಎಂಬ ಮಾಹಿತಿ ಇದೆ.

ಉಮೇಶ್‌ ಅವರು ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆಯೂ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಬಿಎಂಟಿಸಿಯಲ್ಲಿ ಡ್ರೈವರ್‌/ ಕಂಡಕ್ಟರ್‌ ಆಗಿದ್ದ ಉಮೇಶ್‌ ಡೆಪ್ಯುಟೇಷನ್‌ ಆಧಾರದ ಮೇಲೆ ಯಡಿಯೂರಪ್ಪ ಅವರ ಆಪ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಯಡಿಯೂರಪ್ಪ ಪ್ರತಿಪಕ್ಷದ ನಾಯಕರಾಗಿದ್ದಾಗಲೂ ಸೇವೆ ಸಲ್ಲಿಸಿದ್ದರು.

ಯಡಿಯೂರಪ್ಪ ಅವರ ಆಡಳಿತ ಕಾಲದಲ್ಲಿ ನೀರಾವರಿ ಇಲಾಖೆಯಲ್ಲಿ ಸುಮಾರು 2 ಎರಡು ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ನೀರಾವರಿ ಇಲಾಖೆಯ ಟೆಂಡರ್‌, ಬಿಲ್‌ ಪಾಸ್‌ ಮಾಡಿರುವುದಕ್ಕೆ ಸಂಬಂಧಿಸಿದಂತೆ ಎಲ್ಲಾ ವ್ಯವಹಾರಗಳನ್ನೂ ಉಮೇಶ್‌ ಅವರೇ ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಉಮೇಶ್‌ ಅವರು ಗುತ್ತಿಗೆದಾರರು ಸಿಮೆಂಟ್‌ ಡೀಲರ್‌ ಗಳ ಸಂಪರ್ಕ ಹೊಂದಿದ್ದರು. ಚಾರ್ಟೆಡ್‌ ಅಕೌಂಟೆಂಟ್‌ಗಳು ಜೊತೆಗೆ ಸಂಪರ್ಕ ಟ್ಯಾಕ್ಸ್‌ ವಂಚನೆ ನಡೆಸಿರುವ ಆರೋಪ ಕೇಳಿ ಬಂದಿದೆ.‌ ಈ ಕುರಿತು ತನಿಖೆಯಿಂದಲೇ ಹೆಚ್ಚಿನ ವಿವರ ತಿಳಿದು ಬರಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು