12:53 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ನೀರಾವರಿ ಇಲಾಖೆ 2 ಸಾವಿರ ಕೋಟಿ ಅವ್ಯವಹಾರ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ಆಪ್ತನ ಮನೆ ಸೇರಿದಂತೆ 50 ಕಡೆಗಳಲ್ಲಿ ಐಟಿ ದಾಳಿ

07/10/2021, 13:00

ಬೆಂಗಳೂರು(reporterkarnataka.com) : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್‌ ಅವರ ನಗರದ

ಬಾಷ್ಯಂ ಸರ್ಕಲ್‌ನಲ್ಲಿರುವ ಮನೆಯ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 50 ಕಡೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಬಾಷ್ಯಂ ಸರ್ಕಲ್‌ನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಉಮೇಶ್‌ ವಾಸವಾಗಿದ್ದರು. ಐಟಿ ದಾಳಿಯ ವೇಳೆಯಲ್ಲಿ ಉಮೇಶ್‌ ಮನೆಯಲ್ಲಿದ್ದರು ಎಂಬ ಮಾಹಿತಿ ಇದೆ.

ಉಮೇಶ್‌ ಅವರು ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆಯೂ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಬಿಎಂಟಿಸಿಯಲ್ಲಿ ಡ್ರೈವರ್‌/ ಕಂಡಕ್ಟರ್‌ ಆಗಿದ್ದ ಉಮೇಶ್‌ ಡೆಪ್ಯುಟೇಷನ್‌ ಆಧಾರದ ಮೇಲೆ ಯಡಿಯೂರಪ್ಪ ಅವರ ಆಪ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಯಡಿಯೂರಪ್ಪ ಪ್ರತಿಪಕ್ಷದ ನಾಯಕರಾಗಿದ್ದಾಗಲೂ ಸೇವೆ ಸಲ್ಲಿಸಿದ್ದರು.

ಯಡಿಯೂರಪ್ಪ ಅವರ ಆಡಳಿತ ಕಾಲದಲ್ಲಿ ನೀರಾವರಿ ಇಲಾಖೆಯಲ್ಲಿ ಸುಮಾರು 2 ಎರಡು ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ನೀರಾವರಿ ಇಲಾಖೆಯ ಟೆಂಡರ್‌, ಬಿಲ್‌ ಪಾಸ್‌ ಮಾಡಿರುವುದಕ್ಕೆ ಸಂಬಂಧಿಸಿದಂತೆ ಎಲ್ಲಾ ವ್ಯವಹಾರಗಳನ್ನೂ ಉಮೇಶ್‌ ಅವರೇ ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಉಮೇಶ್‌ ಅವರು ಗುತ್ತಿಗೆದಾರರು ಸಿಮೆಂಟ್‌ ಡೀಲರ್‌ ಗಳ ಸಂಪರ್ಕ ಹೊಂದಿದ್ದರು. ಚಾರ್ಟೆಡ್‌ ಅಕೌಂಟೆಂಟ್‌ಗಳು ಜೊತೆಗೆ ಸಂಪರ್ಕ ಟ್ಯಾಕ್ಸ್‌ ವಂಚನೆ ನಡೆಸಿರುವ ಆರೋಪ ಕೇಳಿ ಬಂದಿದೆ.‌ ಈ ಕುರಿತು ತನಿಖೆಯಿಂದಲೇ ಹೆಚ್ಚಿನ ವಿವರ ತಿಳಿದು ಬರಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು