2:57 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ದಲಿತ ಹೆಣ್ಣು ಮಗಳ ಅತ್ಯಾಚಾರಗೈದು ಹತ್ಯೆ: ನಾಳೆ ಮಸ್ಕಿಯಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

07/10/2021, 19:49

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಾದಿಗ ಸಮುದಾಯದ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆಸಿ ಪೆಟ್ರೋಲ್ ಹಾಕಿ ಸುಟ್ಟಿರುವ ಘಟನೆಯ ವಿರುದ್ಧ ಭಾರಿ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿದೆ.

ರಾಜ್ಯ ಸರ್ಕಾರದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಾದಿಗರಿಗೆ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಲಾಗುತ್ತಿದೆ. ಅಸ್ಪೃಶ್ಯತೆ ಆಚರಣೆ, ಮಾರಣಾಂತಿಕ ಹಲ್ಲೆ, ಕೊಲೆ, ಅತ್ಯಾಚಾರ ನಡೆಯುತ್ತಿರುವುದು ಕಂಡು ಬರುತ್ತಿದೆ. ಆದರೆ ಸರ್ಕಾರ ಇಂತಹ ಪ್ರಕರಣಗಳು ನಡೆದರೂ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳದೆ ಅಸಡ್ಡೆ, ಅಲಕ್ಷ್ಯ ತೋರುತ್ತಿದೆ. ಆಡಳಿತ ಪಕ್ಷದಲ್ಲಿ ಇರುವ ಮಾದಿಗ ಶಾಸಕರು ಈ ಕುರಿತು ಮಾತನಾಡಬೇಕು. ಹಾಗೆ ಪ್ರತಿಪಕ್ಷದಲ್ಲಿರುವ ಶಾಸಕ ಸರ್ಕಾರದ ಗಮನ ಸೆಳೆದು ಇಂತಹ ಘಟನಾವಳಿಗಳು ನಿಯಂತ್ರಿಸಲು ಒತ್ತಾಯ ಮಾಡಬೇಕು.

ಸೆ. 8ರಂದು ಸಂಜೆ 6 ಗಂಟೆಗೆ ಮಸ್ಕಿಯ ದಲಿತ, ಪ್ರಗತಿಪರ ರೈತರ, ಕನ್ನಡಪರ ಹಾಗೂ ಇನ್ನುಳಿದ ಹಲವಾರು ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದು ಎಂದು ದಲಿತ ಸಾಹಿತಿ ಸಿ.ದಾನಪ್ಪ ನಿಲೋಗಲ ಹಾಗೂ ದಲಿತ ಮುಖಂಡ   ದೊಡ್ಡಪ್ಪ ಮುರಾರಿ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು