10:11 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ದಲಿತ ಹೆಣ್ಣು ಮಗಳ ಅತ್ಯಾಚಾರಗೈದು ಹತ್ಯೆ: ನಾಳೆ ಮಸ್ಕಿಯಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

07/10/2021, 19:49

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಾದಿಗ ಸಮುದಾಯದ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆಸಿ ಪೆಟ್ರೋಲ್ ಹಾಕಿ ಸುಟ್ಟಿರುವ ಘಟನೆಯ ವಿರುದ್ಧ ಭಾರಿ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿದೆ.

ರಾಜ್ಯ ಸರ್ಕಾರದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಾದಿಗರಿಗೆ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಲಾಗುತ್ತಿದೆ. ಅಸ್ಪೃಶ್ಯತೆ ಆಚರಣೆ, ಮಾರಣಾಂತಿಕ ಹಲ್ಲೆ, ಕೊಲೆ, ಅತ್ಯಾಚಾರ ನಡೆಯುತ್ತಿರುವುದು ಕಂಡು ಬರುತ್ತಿದೆ. ಆದರೆ ಸರ್ಕಾರ ಇಂತಹ ಪ್ರಕರಣಗಳು ನಡೆದರೂ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳದೆ ಅಸಡ್ಡೆ, ಅಲಕ್ಷ್ಯ ತೋರುತ್ತಿದೆ. ಆಡಳಿತ ಪಕ್ಷದಲ್ಲಿ ಇರುವ ಮಾದಿಗ ಶಾಸಕರು ಈ ಕುರಿತು ಮಾತನಾಡಬೇಕು. ಹಾಗೆ ಪ್ರತಿಪಕ್ಷದಲ್ಲಿರುವ ಶಾಸಕ ಸರ್ಕಾರದ ಗಮನ ಸೆಳೆದು ಇಂತಹ ಘಟನಾವಳಿಗಳು ನಿಯಂತ್ರಿಸಲು ಒತ್ತಾಯ ಮಾಡಬೇಕು.

ಸೆ. 8ರಂದು ಸಂಜೆ 6 ಗಂಟೆಗೆ ಮಸ್ಕಿಯ ದಲಿತ, ಪ್ರಗತಿಪರ ರೈತರ, ಕನ್ನಡಪರ ಹಾಗೂ ಇನ್ನುಳಿದ ಹಲವಾರು ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದು ಎಂದು ದಲಿತ ಸಾಹಿತಿ ಸಿ.ದಾನಪ್ಪ ನಿಲೋಗಲ ಹಾಗೂ ದಲಿತ ಮುಖಂಡ   ದೊಡ್ಡಪ್ಪ ಮುರಾರಿ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು