5:40 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಕೋಮು ಪ್ರಚೋದನೆ ಆರೋಪ: ಚೈತ್ರಾ ಕುಂದಾಪುರ ವಿರುದ್ದ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲು

08/10/2021, 16:10

ಮಂಗಳೂರು(reporterkarnataka.com):

ಸುರತ್ಕಲ್‌ನಲ್ಲಿ ಭಜರಂಗದಳ ಮತ್ತು ದುರ್ಗಾವಾಹಿನಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಚೈತ್ರಾ ಕುಂದಾಪುರ ಎಂಬವರ ಮೇಲೆ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಮಾವೇಶದಲ್ಲಿ ಚೈತ್ರಾ ಅವರು ಮುಸ್ಲಿಂ ಮಹಿಳೆಯರನ್ನು ಮತ್ತು ತುಳುನಾಡಿನ ದೈವಗಳಾದ ಕೋಟಿಚೆನ್ನಯ್ಯ ಅವರನ್ನು ಕೆಟ್ಟದಾಗಿ ಉದಾಹರಿಸಿ ಕೋಮುಗಲಭೆಗೆ ಪ್ರಚೋದಿಸಿದ್ದರು ಎಂದು ರಾಜ್ಯ ಕಾಂಗ್ರೆಸ್ ಸಂಯೋಜಕ ಬೊಂಡಾಲ ಚಿತ್ತರಂಜನ್‌ ಶೆಟ್ಟಿ ಅವರು ಸುರತ್ಕಲ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಚೈತ್ರಾ ಕುಂದಾಪುರ ಮತ್ತು ಕಾರ್ಯಕ್ರಮ ಸಂಘಟಿಸಿದವರನ್ನು ಬಂಧಿಸಬೇಕು ಎಂದು ದೂರಿನಲ್ಲಿ ವಿನಂತಿಸಿದ್ದಾರೆ.
ಕೋಟಿ ಚೆನ್ನಯ್ಯ ಅವರನ್ನು ಕಾರ್ಯಕ್ರಮದಲ್ಲಿ ಅವಮಾನಿಸಿದ್ದಾರೆ. ದೈವಗಳ ಕೈಯ್ಯಲ್ಲಿ ಇರುವುದು ಸುರಿಯ ಎಂಬ ಆಯುಧವೇ ಹೊರತು, ತಲವಾರು ಅಲ್ಲ. ತಲವಾರು ಹಿಡಿಯುವುದು ರೌಡಿಗಳು, ದುಷ್ಟರು. ತುಳುನಾಡಿನ ಮಹಾಪುರುಷರು ಹೋರಾಡಿದ್ದು ಆಗಿನ ಜಮೀನ್ದಾರಿ ವಿರುದ್ದವೆ ಹೊರತು ಮುಸ್ಲಿಮರ ವಿರುದ್ದ ಅಲ್ಲ. ಆದರೆ ಇವರು ದೈವಗಳ ಕುರಿತು ತಪ್ಪು ಕಲ್ಪನೆಯನ್ನು ಜನರ ತಲೆಗೆ ತುಂಬಿಸಿ ಕೋಮುಗಲಭೆಗೆ ಪ್ರಚೋದಿಸಿದ್ದಾರೆ ಎಂದು ಚಿತ್ತರಂಜನ್ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು