1:31 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ನಾಗಮಂಗಲದಲ್ಲಿ ‘ವೈದ್ಯರ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮಕ್ಕೆ ಶಾಸಕ ಸುರೇಶ್ ಗೌಡ ಚಾಲನೆ 

27/05/2021, 07:28

ಡಿ.ಆರ್ .ಜಗದೀಶ್ ದೇವಲಾಪುರ ನಾಗಮಂಗಲ

info.reporterkarnataka@gmail.com

ನಾಗಮಂಗಲ ತಾಲ್ಲೂಕು ಕೇಂದ್ರದಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಸರ್ಕಾರದ ಯೋಜನೆಗೆ ಶಾಸಕ ಸುರೇಶಗೌಡ ಶುಭ ಹಾರೈಸಿ ಚಾಲನೆ ನೀಡಿದರು.

ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಆವರಣದಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಯೋಜನೆಗೆ ವಾಹನವನ್ನು ಸಾಂಕೇತಿಕವಾಗಿ ಉದ್ಘಾಟನೆ ಮಾಡುವ ಮುಖಾಂತರ ಚಾಲನೆ ನೀಡಿದರು.

ತಾಲ್ಲೂಕಿನಲ್ಲಿ ಇರುವ ಹಳ್ಳಿಗಳ ಕಡೆ ಆರೋಗ್ಯ ಅಧಿಕಾರಿಗಳನ್ನು ಬಳಸಿಕೊಂಡು ಯೋಜನೆಗೆ ಕಾರ್ಯ ರೂಪಿಸುವುದಾಗಿ ಅವರು ತಿಳಿಸಿದರು.

ಸರ್ಕಾರದ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಹಳ್ಳಿಗರು ಈಗಾಗಲೇ ಸ್ವಯಂಕೃತವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಇರುವ ಸಿಬ್ಬಂದಿಗಳನ್ನು ಬಳಸಿಕೊಂಡು ಸೋಂಕಿತರನ್ನು ಗುರುತಿಸಿ ಕರೋನಾ ಸೆಂಟರಿಗೆ ಕಳಿಸುವ ಮುಖಾಂತರ ಸೋಂಕಿತರ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಿದ್ದು ತಾಲ್ಲೂಕಿನಲ್ಲಿ ಕಾರ್ಯರೂಪಕ್ಕೆ ತರಲಾಗಿದೆ ಎಂದು ತಾಲ್ಲೂಕು ಆರೋಗ್ಯ ಆಡಳಿತಾಧಿಕಾರಿ ಪ್ರಸನ್ನ ತಿಳಿಸಿದರು.

ಇದೇ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಕುಂಞಿ ಅಹಮದ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸತೀಶ್, ಪ್ರಭಾರ 

ಆರೋಗ್ಯಾಧಿಕಾರಿ ಪ್ರಸನ್ನ, ವೈದ್ಯಾಧಿಕಾರಿಯಾಗಿ ಚೇತನ್ ಹಾಗೂ ತಾಲ್ಲೂಕು ಅಧಿಕಾರಿಗಳು ಸಿಬ್ಬಂದಿ ವರ್ಗದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು