2:12 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ನಾಗಮಂಗಲದಲ್ಲಿ ‘ವೈದ್ಯರ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮಕ್ಕೆ ಶಾಸಕ ಸುರೇಶ್ ಗೌಡ ಚಾಲನೆ 

27/05/2021, 07:28

ಡಿ.ಆರ್ .ಜಗದೀಶ್ ದೇವಲಾಪುರ ನಾಗಮಂಗಲ

info.reporterkarnataka@gmail.com

ನಾಗಮಂಗಲ ತಾಲ್ಲೂಕು ಕೇಂದ್ರದಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಸರ್ಕಾರದ ಯೋಜನೆಗೆ ಶಾಸಕ ಸುರೇಶಗೌಡ ಶುಭ ಹಾರೈಸಿ ಚಾಲನೆ ನೀಡಿದರು.

ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಆವರಣದಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಯೋಜನೆಗೆ ವಾಹನವನ್ನು ಸಾಂಕೇತಿಕವಾಗಿ ಉದ್ಘಾಟನೆ ಮಾಡುವ ಮುಖಾಂತರ ಚಾಲನೆ ನೀಡಿದರು.

ತಾಲ್ಲೂಕಿನಲ್ಲಿ ಇರುವ ಹಳ್ಳಿಗಳ ಕಡೆ ಆರೋಗ್ಯ ಅಧಿಕಾರಿಗಳನ್ನು ಬಳಸಿಕೊಂಡು ಯೋಜನೆಗೆ ಕಾರ್ಯ ರೂಪಿಸುವುದಾಗಿ ಅವರು ತಿಳಿಸಿದರು.

ಸರ್ಕಾರದ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಹಳ್ಳಿಗರು ಈಗಾಗಲೇ ಸ್ವಯಂಕೃತವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಇರುವ ಸಿಬ್ಬಂದಿಗಳನ್ನು ಬಳಸಿಕೊಂಡು ಸೋಂಕಿತರನ್ನು ಗುರುತಿಸಿ ಕರೋನಾ ಸೆಂಟರಿಗೆ ಕಳಿಸುವ ಮುಖಾಂತರ ಸೋಂಕಿತರ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಿದ್ದು ತಾಲ್ಲೂಕಿನಲ್ಲಿ ಕಾರ್ಯರೂಪಕ್ಕೆ ತರಲಾಗಿದೆ ಎಂದು ತಾಲ್ಲೂಕು ಆರೋಗ್ಯ ಆಡಳಿತಾಧಿಕಾರಿ ಪ್ರಸನ್ನ ತಿಳಿಸಿದರು.

ಇದೇ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಕುಂಞಿ ಅಹಮದ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸತೀಶ್, ಪ್ರಭಾರ 

ಆರೋಗ್ಯಾಧಿಕಾರಿ ಪ್ರಸನ್ನ, ವೈದ್ಯಾಧಿಕಾರಿಯಾಗಿ ಚೇತನ್ ಹಾಗೂ ತಾಲ್ಲೂಕು ಅಧಿಕಾರಿಗಳು ಸಿಬ್ಬಂದಿ ವರ್ಗದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು