10:19 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ವಿದ್ಯುತ್ ಅವಘಡಕ್ಕೆ ಪ್ರಿಜ್ ಬ್ಲಾಸ್ಟ್:  30 ಸಾವಿರ ನಗದು ಸೇರಿ 1 ಲಕ್ಷ ರೂ. ಮೌಲ್ಯ ಪೀಠೋಪಕರಣ ಭಸ್ಮ

09/10/2021, 16:38

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ 20ನೇ ವಾರ್ಡ್ ಗೋವಿಂದಗಿರಿ ತಾಂಡ ಗ್ರಾಮದಲ್ಲಿ ಗೋಪ್ಯಾನಾಯ್ಕ ಎಂಬುವರಿಗೆ ಸೇರಿದ ಅಂಗಡಿಯಲ್ಲಿದ್ದ ಪ್ರಿಜ್ ವಿದ್ಯುತ್ ಸರಬರಾಜಿನಲ್ಲಾದ ಏರುಪೇರಿನಿಂದ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಯಾವುದ ಸಾವು- ನೋವು ಸಂಭವಿಸಿಲ್ಲ.

ಸೆ 7ರಂದು ರಾತ್ರಿ9 ಗಂಟೆಯಲ್ಲಿ ವಿದ್ಯುತ್ ಸರಬರಾಜಿಲ್ಲಾದ  ಏರುಪೇರಿನಿಂದಾಗಿ ಪ್ರಿಜ್ ಬ್ಲಾಸ್ಟ್ ಆಗಿದೆ. ಪ್ರಿಜ್ ಬ್ಲಾಸ್ಟ್ ಆದ ಪರಿಣಾಮ ಮೇಲ್ಚಾವಣೆ ಕಿತ್ತಿದ್ದು ಬೆಂಕಿ ಹೊತ್ತಿ ಉರಿದ ಪರಿಣಾಮ ದುಬಾರಿ ಬೆಲೆಯ ಪೀಠೋಪಕರಣಗಳು ಹಾಗೂ 30 ಸಾವಿರ ನಗದು ಹಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.

ಈ  ಸಂದರ್ಭದಲ್ಲಿ ಹತ್ತಿರದಲ್ಲಿ ಯಾರು ಇಲ್ಲದ್ದರಿಂದಾಗಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ದುಬಾರಿ ಬೆಲೆಯ ಪೀಠೋಪಕರಣಗಳು ಹಾಗೂ ಪ್ರಿಜ್ ಸಂಪೂರ್ಣ ಭಸ್ಮಗೊಂಡಿದ್ದು. ವಿಷಯ ತಿಳಿದ ಕೂಡಲೇ ಜಾಗ್ರತರಾದ ಅಕ್ಕಪಕ್ಕದವರು ಹಾಗೂ ಗ್ರ‍ಾಮಸ್ಥರು, ಸಮಯ ಪ್ರಜ್ಞೆ ಮೆರದಿದ್ದು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಪ್ರಿಜ್ 

ಬ್ಲಾಸ್ಟ್ ನಿಂದಾಗಿ ಬೆಂಕಿ ಹೊತ್ತಿ ಹುರಿದಿರುವುದರಿಂದಾಗಿ ನಗದು ಹಣ ಸೇರಿದಂತೆ ದುಭಾರಿ ಪೀಟೋಪಕರಣಗಳು ಸುಟ್ಟು ಕರಕಲಾಗಿದ್ದು ಒಟ್ಟು 1 ಲಕ್ಷಕ್ಕೂ ಅಧಿಕ ನಷ್ಟ ವಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು