10:16 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ದಲಿತ ಹೆಣ್ಣು ಮಗಳ ಅತ್ಯಾಚಾರಗೈದು ಹತ್ಯೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ: ಮಸ್ಕಿಯಲ್ಲಿ ಪ್ರತಿಭಟನಾಕರರ ಆಗ್ರಹ

09/10/2021, 16:46

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಮಸ್ಕಿ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಾದಿಗ ಸಮುದಾಯದ ಹೆಣ್ಣು ಮಗಳ ಅತ್ಯಾಚಾರ ಮಾಡಿ ಪೆಟ್ರೋಲ್ ಹಾಕಿ ಸುಟ್ಟಿರುವ ಘಟನೆ ನಿಜಕ್ಕೂ ಅತ್ಯಂತ ನೋವಿನ ಸಂಗತಿ. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ದಲಿತ ಸಾಹಿತಿ ದಾನಪ್ಪ ನಿಲಗಲ್ ಒತ್ತಾಯಿಸಿದ್ದಾರೆ.

ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಸ್ಕಿ ಅಂಬೇಡ್ಕರ್ ಪ್ರತಿಮೆ ವರೆಗೆ ನಡೆದ ಪಂಜಿನ ಮೆರವಣಿಗೆ ನಂತರ ಅವರು ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.

 ಈ ಸರ್ಕಾರದ ಆಡಳಿತದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಾದಿಗರಿಗೆ ಮೇಲೆ ನಿರಂತರವಾಗಿ ಅಸ್ಪೃಶ್ಯತೆ ಆಚರಣೆ, ಮಾರಣಾಂತಿಕ ಹಲ್ಲೆ, ಕೊಲೆ, ಅತ್ಯಾಚಾರ ನಡೆಯುತ್ತಿರುವುದು ಕಂಡು ಬರುತ್ತಿದೆ. ಆದರೆ ಸರ್ಕಾರ ಇಂತಹ ಪ್ರಕರಣಗಳು ನಡೆದರು ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳದೆ ಅಸಡ್ಡೆ ತೋರುತ್ತಿದೆ. ಆಡಳಿತ ಪಕ್ಷದಲ್ಲಿ ಇರುವ ಮಾದಿಗ ಶಾಸಕರು ಈ ಕುರಿತು 


ಮಾತನಾಡಬೇಕು. ಹಾಗೆ ವಿರೋಧ ಪಕ್ಷದ ಶಾಸಕ ಸರ್ಕಾರದ ಗಮನ ಸೆಳೆದು ಇಂತಹ ಘಟನಾವಳಿಗಳು ನಿಯಂತ್ರಣ ಸಾಧಿಸಲು ಒತ್ತಾಯ ಮಾಡಬೇಕು. ಅತ್ಯಾಚಾರ ಮಾಡಿದ ಆರೋಪಿಗಳನ್ನು ಬಂಧಿಸಿ ಗಲ್ಲುಶಿಕ್ಷೆಗೆ ಒಳಪಡಿಸಬೇಕೆಂದು.

ಇತ್ತೀಚಿನ ಸುದ್ದಿ

ಜಾಹೀರಾತು