4:06 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಓಬಳಾಪುರ: ಸರಕಾರ ನಿರ್ಮಿಸಿದ ಚೆಕ್ ಡ್ಯಾಂ ಒಡೆದು ಅಕ್ರಮ ಮರಳು ಸಾಗಣಿಕೆ; ಗ್ರಾಮಸ್ಥರಿಂದ ಆರೋಪ

09/10/2021, 21:52

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಹುರುಳಿಹಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಓಬಳಾಪುರ ಗ್ರಾಮದ ಹೊರವಲಯದಲ್ಲಿ ಹಳ್ಳದಲ್ಲಿ ನಿರ್ಮಿಸಿರುವ ಚೆಕ್ ಡ್ಯಾಂ ಒಡೆದು ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ ಎಂಬ ದೂರು ಕೇಳಿ ಬಂದಿದೆ.


ಗ್ರಾಮದ ವ್ಯಕ್ತಿಯೊಬ್ಬರು ಚೆಕ್ ಡ್ಯಾಂ ಕೆಡವಿ ಅದರಡಿಯಲ್ಲಿರುವ ಮರಳನ್ನು ಅಕ್ರಮವಾಗಿ ಬಗೆಯಲಾಗುತ್ತಿದ್ದು, ಮರಳನ್ನು ತಮ್ಮ ಕಾಮಗಾರಿಗೆ ಬಳಸುತ್ತಿದ್ದಾರೆಂದು ಓಬಳಾಪುರ ಗ್ರಾಮ ಸೇರಿದಂತೆ ಕೆಲ ಗ್ರಾಮಸ್ಥರು ದೂರಿದ್ದಾರೆ.

ಸರ್ಕಾರ ನಿರ್ಮಿಸಿರುವ ವೆಕ್ ಡ್ಯಾಂ ಅನ್ನು ಕೆಡವಿರೋದೇ ಕಾನೂನು ಬಾಹಿರವಾಗಿದ್ದು, ಹಳ್ಳದಲ್ಲಿರುವ ಮರಳನ್ನು ಯಾವುದೇ ಪರವಾನಗಿ ಇಲ್ಲದೇ ಸಾಗಿಸಲಾಗುತ್ತಿದೆ ಎಂದು ಹೊಸಹಳ್ಳಿ ಹೋಬಳಿಯ ಕೆಲ ಸಂಘಟನೆಗಳ ಪದಾಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು  ಕಂದಾಯ ಇಲಾಖಾಧಿಕಾರಿಗಳು ಹಾಗೂ ತಾಪಂ ಕಾರ್ಯನಿರ್ವಹಣಾಧಿಕಾರಿ ಸ್ಥಳ ಪರಿಶೀಲಸಬೇಕಿದೆ. ಸರ್ಕಾರ ನಿರ್ಮಿಸಿರುವ ಚೆಕ್ ಡ್ಯಾಂ ಧ್ವಂಸಗೊಳಿಸಲಾಗಿದೆ ಹಾಗೂ ಕೆಲ ದಿಬಗಳಿಂದ ನಿರಂತರ, ಪ್ರತಿ ದಿನ ಹತ್ತಾರು ಟ್ರಾಕ್ಟ್ರ್ ನಷ್ಟು ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದ್ದು, ಸಂಬಂಧಿಸಿದಂತೆ ತಾಪಂ ಕಾರ್ಯನಿರ್ಹಣಾಧಿಕಾರಿ ಹಾಗೂ ಕಂದಾಯ ಇಲಾಖಾಧಿಕಾರಿ ಶೀಘ್ರವೇ ಸ್ಥಳ ಪರಿಶೀಲಿಸಬೇಕಿದೆ. ಅಕ್ರಮ ಜರುಗಿಸಿರುವ ವಿರುದ್ಧ ಸೂಕ್ತ ಶಿಸ್ಥು ಕ್ರಮ ಜರುಗಿಸಬೇಕೆಂದು, ಓಬಳಾಪುರ ಗ್ರಾಮದವರು ಮತ್ತು ಕೆಲ ಸಂಘಟನೆಗಳ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು