4:30 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಜಿಲ್ಲೆಯ ಸಮಸ್ಯೆ ಕುರಿತು ಚರ್ಚಿಸಿದ ಬಸನಗೌಡ 

27/05/2021, 07:34

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಬೆಂಗಳೂರಿನಲ್ಲಿ 

ಪ್ರತಿಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಕೋವಿಡ್-19  ಎರಡನೇ  ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಜಿಲ್ಲೆಯಲ್ಲಿ ಹಾಗೂ ಕ್ಷೇತ್ರದಲ್ಲಿ ಪ್ರತಿನಿತ್ಯ  ಹೆಚ್ಚು ಕೊರೊನಾ ಸೋಂಕಿತರು ಮತ್ತು ಬ್ಲ್ಯಾಕ್ ಪಂಗಸ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಅತ್ಯುನ್ನತ ದರ್ಜೆಯ ಆಸ್ಪತ್ರೆಗಳ ಕೊರತೆ ಹಾಗೂ ಜಿಲ್ಲೆಗೆ ಆಕ್ಸಿಜನ್, ವೆಂಟಿಲೇಟರ್, ಇಂಜೆಕ್ಷನ್ ಗಳು  ಸರಿಯಾದ ವೇಳೆಗೆ ಸರಬರಾಜು ಮಾಡುತ್ತಿಲ್ಲ,. ರಾಯಚೂರು ಗ್ರಾಮೀಣದ ರೈತರಿಗೆ 12 ತಾಸು ವಿದ್ಯುತ್ ಕಡಿತ ಮಾಡಿ ಕೇವಲ 7 ತಾಸು ಮಾತ್ರ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡುತ್ತಿದ್ದಾರೆ. ಕನಿಷ್ಠ 12 ತಾಸು ವಿದ್ಯುತ್ ನೀಡಬೇಕೆಂದು ತಿಳಿಸಿದರು. 

ಮುಂಗಾರು ಪ್ರಾರಂಭವಾಗುವುದರಿಂದ ರೈತರಿಗೆ ಬಿತ್ತನೆ ಬೀಜಗಳು ಮತ್ತು ರಸಗೊಬ್ಬರ ರೈತರಿಗೆ ಸಮರ್ಪಕವಾಗಿ ನೀಡಬೇಕು. ಕ್ಷೇತ್ರದಲ್ಲಿ  ಕೃಷಿ ಇನ್ನು ಮುಂತಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸಲು ರಾಜ್ಯಸರ್ಕಾರಕ್ಕೆ ಒತ್ತಾಯಿಸುವಂತೆ ಶಾಸಕರು ಚರ್ಚಿಸಿದರು . ಈ ಸಂದರ್ಭದಲ್ಲಿ  ಲಿಂಗಸೂಗುರು ಶಾಸಕ ಡಿ.ಎಸ್. ಹೂಲಗೇರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು