6:37 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಜಿಲ್ಲೆಯ ಸಮಸ್ಯೆ ಕುರಿತು ಚರ್ಚಿಸಿದ ಬಸನಗೌಡ 

27/05/2021, 07:34

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಬೆಂಗಳೂರಿನಲ್ಲಿ 

ಪ್ರತಿಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಕೋವಿಡ್-19  ಎರಡನೇ  ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಜಿಲ್ಲೆಯಲ್ಲಿ ಹಾಗೂ ಕ್ಷೇತ್ರದಲ್ಲಿ ಪ್ರತಿನಿತ್ಯ  ಹೆಚ್ಚು ಕೊರೊನಾ ಸೋಂಕಿತರು ಮತ್ತು ಬ್ಲ್ಯಾಕ್ ಪಂಗಸ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಅತ್ಯುನ್ನತ ದರ್ಜೆಯ ಆಸ್ಪತ್ರೆಗಳ ಕೊರತೆ ಹಾಗೂ ಜಿಲ್ಲೆಗೆ ಆಕ್ಸಿಜನ್, ವೆಂಟಿಲೇಟರ್, ಇಂಜೆಕ್ಷನ್ ಗಳು  ಸರಿಯಾದ ವೇಳೆಗೆ ಸರಬರಾಜು ಮಾಡುತ್ತಿಲ್ಲ,. ರಾಯಚೂರು ಗ್ರಾಮೀಣದ ರೈತರಿಗೆ 12 ತಾಸು ವಿದ್ಯುತ್ ಕಡಿತ ಮಾಡಿ ಕೇವಲ 7 ತಾಸು ಮಾತ್ರ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡುತ್ತಿದ್ದಾರೆ. ಕನಿಷ್ಠ 12 ತಾಸು ವಿದ್ಯುತ್ ನೀಡಬೇಕೆಂದು ತಿಳಿಸಿದರು. 

ಮುಂಗಾರು ಪ್ರಾರಂಭವಾಗುವುದರಿಂದ ರೈತರಿಗೆ ಬಿತ್ತನೆ ಬೀಜಗಳು ಮತ್ತು ರಸಗೊಬ್ಬರ ರೈತರಿಗೆ ಸಮರ್ಪಕವಾಗಿ ನೀಡಬೇಕು. ಕ್ಷೇತ್ರದಲ್ಲಿ  ಕೃಷಿ ಇನ್ನು ಮುಂತಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸಲು ರಾಜ್ಯಸರ್ಕಾರಕ್ಕೆ ಒತ್ತಾಯಿಸುವಂತೆ ಶಾಸಕರು ಚರ್ಚಿಸಿದರು . ಈ ಸಂದರ್ಭದಲ್ಲಿ  ಲಿಂಗಸೂಗುರು ಶಾಸಕ ಡಿ.ಎಸ್. ಹೂಲಗೇರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು