4:51 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಜಿಲ್ಲೆಯ ಸಮಸ್ಯೆ ಕುರಿತು ಚರ್ಚಿಸಿದ ಬಸನಗೌಡ 

27/05/2021, 07:34

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಬೆಂಗಳೂರಿನಲ್ಲಿ 

ಪ್ರತಿಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಕೋವಿಡ್-19  ಎರಡನೇ  ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಜಿಲ್ಲೆಯಲ್ಲಿ ಹಾಗೂ ಕ್ಷೇತ್ರದಲ್ಲಿ ಪ್ರತಿನಿತ್ಯ  ಹೆಚ್ಚು ಕೊರೊನಾ ಸೋಂಕಿತರು ಮತ್ತು ಬ್ಲ್ಯಾಕ್ ಪಂಗಸ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಅತ್ಯುನ್ನತ ದರ್ಜೆಯ ಆಸ್ಪತ್ರೆಗಳ ಕೊರತೆ ಹಾಗೂ ಜಿಲ್ಲೆಗೆ ಆಕ್ಸಿಜನ್, ವೆಂಟಿಲೇಟರ್, ಇಂಜೆಕ್ಷನ್ ಗಳು  ಸರಿಯಾದ ವೇಳೆಗೆ ಸರಬರಾಜು ಮಾಡುತ್ತಿಲ್ಲ,. ರಾಯಚೂರು ಗ್ರಾಮೀಣದ ರೈತರಿಗೆ 12 ತಾಸು ವಿದ್ಯುತ್ ಕಡಿತ ಮಾಡಿ ಕೇವಲ 7 ತಾಸು ಮಾತ್ರ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡುತ್ತಿದ್ದಾರೆ. ಕನಿಷ್ಠ 12 ತಾಸು ವಿದ್ಯುತ್ ನೀಡಬೇಕೆಂದು ತಿಳಿಸಿದರು. 

ಮುಂಗಾರು ಪ್ರಾರಂಭವಾಗುವುದರಿಂದ ರೈತರಿಗೆ ಬಿತ್ತನೆ ಬೀಜಗಳು ಮತ್ತು ರಸಗೊಬ್ಬರ ರೈತರಿಗೆ ಸಮರ್ಪಕವಾಗಿ ನೀಡಬೇಕು. ಕ್ಷೇತ್ರದಲ್ಲಿ  ಕೃಷಿ ಇನ್ನು ಮುಂತಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸಲು ರಾಜ್ಯಸರ್ಕಾರಕ್ಕೆ ಒತ್ತಾಯಿಸುವಂತೆ ಶಾಸಕರು ಚರ್ಚಿಸಿದರು . ಈ ಸಂದರ್ಭದಲ್ಲಿ  ಲಿಂಗಸೂಗುರು ಶಾಸಕ ಡಿ.ಎಸ್. ಹೂಲಗೇರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು