6:39 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಅಥಣಿ: ತುಂಬಿ ಹರಿಯುತ್ತಿದ್ದ ಕರಿಮಸೂತಿ ಕಾಲುವೆಗೆ ಬಿದ್ದ 4 ಮಂದಿ ಮಕ್ಕಳು; 2  ಪುಟಾಣಿಗಳ ದಾರುಣ ಅಂತ್ಯ

10/10/2021, 11:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಕಾಲುವೆ ಬಳಿ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಅಕಸ್ಮಾತ್ ಕಾಲು ಜಾರಿ ಕರಿಮಸೂತಿ ಕಾಲುವೆಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ಸಂಜೆ ನಡೆದಿದೆ.

ಗ್ರಾಮದ ಸರಕಾರಿ ಪ್ರೌಢ ಶಾಲೆ ಸಮೀಪ ಹಾದು ಹೋಗಿರುವ ಕರಿಮಸೂತಿ ಕಾಲುವೆಯಲ್ಲಿ ನೀರು ತುಂಬಿ ಹರಿಯುತ್ತಿದ್ದು, ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಮಕ್ಕಳಾದ ಶ್ರೀಧರ ಶಂಕರ ಪುಂಡಿಪಲ್ಲೆ (3), ವಿಶ್ವನಾಥ ವಿನಾಯಕ ಪುಂಡಿಪಲ್ಲೆ (8), ವಿಜಯ ವಿನಾಯಕ ಪುಂಡಿಪಲ್ಲೆ (7) ಹಾಗೂ ಸ್ವಪ್ನಾ ವಿನಾಯಕ ಪುಂಡಿಪಲ್ಲೆ (11) ಎಂಬ ನಾಲ್ವರು ಮಕ್ಕಳು ಆಟವಾಡಲು ಕಾಲುವೆ ಹತ್ತಿರ ಹೋಗಿ ಕಾಲುವೆಯಲ್ಲಿ ಬಿದ್ದಿದ್ದರು. ಇವರಲ್ಲಿ ಶ್ರೀಧರ ಶಂಕರ ಪುಂಡಿಪಲ್ಲೆ (3), ವಿಶ್ವನಾಥ ವಿನಾಯಕ ಪುಂಡಿಪಲ್ಲೆ (8) ಇವರನ್ನು ಕಾಲುವೆಯಿಂದ ಬಚಾವ್ ಮಾಡಲಾಗಿದೆ. ವಿಜಯ ವಿನಾಯಕ ಪುಂಡಿಪಲ್ಲೆ (7) ಹಾಗೂ ಸ್ವಪ್ನಾ ವಿನಾಯಕ ಪುಂಡಿಪಲ್ಲೆ (11) ಇಬ್ಬರು ಸಾವನ್ನಪ್ಪಿದ್ದಾರೆ.


ಅಗ್ನಿಶಾಮಕ ದಳ ಸಿಬ್ಬಂದಿಯ ಸಹಾಯದಿಂದ ಎಲ್ಲರನ್ನು ಹೊರ ತಗೆಯುವಷ್ಟರಲ್ಲಿ ಇಬ್ಬರು ನೀರಿನಲ್ಲಿಯೇ ಸಾವನ್ನಪ್ಪಿದ್ದರು. ಈ ಕುರಿತು ಐಗಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳದಲ್ಲಿ ಮಕ್ಕಳು ಸಾವನ್ನಪಿದ ಘಟನೆಯನ್ನು ನೋಡಿ ಗ್ರಾಮಸ್ಥರ ಹಾಗೂ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು