2:01 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಮಸ್ಕಿ ಕ್ಷೇತ್ರದ ಬೆಳ್ಳಿಗನೂರು ಗ್ರಾಮದಲ್ಲಿ ತಡೆಗೋಡೆ  ಇಲ್ಲದ ನೂತನ ಸೇತುವೆ: ಅಪಾಯಕ್ಕೆ ಭಾರಿ ಆಹ್ವಾನ

10/10/2021, 11:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರದ ಬೆಳ್ಳಿಗನೂರು ಗ್ರಾಮದಲ್ಲಿ ಉಟಕನೂರು ಹೋಗುವ ರಸ್ತೆಗೆ ನೂತವಾಗಿ ನಿರ್ಮಿಸಿದ ಸೇತುವೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಪಕ್ಕದಲ್ಲೇ ಶಾಲೆ ಇರುವ ಈ ಸೇತುವೆಗೆ ತಡೆಗೋಡೆ ಅಥವಾ ಗಾರ್ಡ್ ನಿರ್ಮಿಸದೇ ಇರುವುದೇ ಡೇಂಜರ್ ಸನ್ನಿವೇಶವನ್ನು ಸೃಷ್ಟಿಸಿದೆ.


ನೂತನ ಸೇತುವೆಯ ಕಾಮಗಾರಿ ಮುಗಿದು ಬಿಲ್ ಪಾವತಿಯೂ ನಡೆದಿದ್ದರೂ ಸೇತುವೆಗೆ ತಡೆಗೋಡೆ ಮಾತ್ರ ನಿರ್ಮಿಸಿಲ್ಲ. ಇಲ್ಲೇ ಪಕ್ಕದಲ್ಲಿ ಸರಕಾರಿ ಶಾಲೆ ಇದ್ದು, ನೂರಾರು ಮಕ್ಕಳು ದಿನಾಲೂ ಇಲ್ಲಿ ಅಡ್ಡಾಡುತ್ತಾರೆ. ಸಣ್ಣ ಮಕ್ಕಳು ಸೇತುವೆ ಬದಿಯಿಂದ ಕುತೂಹಲದಿಂದ ಕೆಳಗೆ ಇಣುಕುವ ಸಾಧ್ಯತೆಗಳಿವೆ. ಆದರೆ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮಾತ್ರ ಏನೂ ನಡೆಯದಂತೆ ಮೌನವ್ರತಕ್ಕೆ ಶರಣಾಗಿದ್ದಾರೆ. ಗ್ರಾಮಸ್ಥರು ಹಲವು ಬಾರಿ ಗುತ್ತಿಗೆದಾರರಿಗೆ ಕೂಡ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆದರೆ ಯಾವುದೇ ಸ್ಪಂದನೆ ಕಂಡು ಬಂದಿಲ್ಲ.ಈ ಹಿನ್ನೆಲೆಯಲ್ಲಿ 

ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ್ ಮಧ್ಯಪ್ರೇಶಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು