9:17 AM Sunday8 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಬಾಬಾ ರಾಮ್ ದೇವ್ ವಿರುದ್ಧ ಐಎಂಎ ಮತ್ತೆ ಗರಂ: ದೇಶದ್ರೋಹ ಪ್ರಕರಣ ದಾಖಲಿಸಲು ಪ್ರಧಾನಿಗೆ ಒತ್ತಾಯ

27/05/2021, 07:43

ನವದೆಹಲಿ(reporterkarnataka news): ಕೊರೊನಾ ಲಸಿಕೆ ಹಾಗೂ ಅಲೋಪತಿ ವೈದ್ಯ ಪದ್ಧತಿ ಕುರಿತು ಟೀಕೆ ಮಾಡಿರುವ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ದ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್(ಐಎಂಎ) ಫುಲ್ ಗರಂ ಆಗಿದೆ. ಪತಂಜಲಿ ಮುಖ್ಯಸ್ಥರಾದ ರಾಮ್ ದೇವ್ ಅವರು ಕೊರೊನಾ ಲಸಿಕೆ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಐಎಂಎ ಪ್ರಧಾನಿ 

ನರೇಂದ್ರ ಮೋದಿ ಅವರಿಗೆ ಐಎಂಎ ಪತ್ರ ಬರೆದಿದೆ.

ಅಲೋಪಥಿ ಔಷಧಗಳನ್ನು ಪಡೆಯುತ್ತಿರುವ ಲಕ್ಷಾಂತರ ಜನರು ಮೃತಪಡುತ್ತಿದ್ದಾರೆ. ಕೋವಿಡ್ ಲಸಿಕೆ ಪಡೆದ 10,000 ವೈದ್ಯರು ಸಾವನ್ನಪ್ಪಿದ್ದಾರೆ ಎಂದು  ಬಾಬಾ ರಾಮ್ ದೇವ್ ಹೇಳಿಕೆ ನೀಡಿದ್ದರು. ಅಲೋಪಥಿ ವೈದ್ಯಕೀಯ ಪದ್ಧತಿ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಾಬಾ ರಾಮ್ ದೇವ್ ಕ್ಷಮೆಯಾಚಿಸಬೇಕು ಹಾಗೂ 1,000 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಪಾವತಿಸಬೇಕು ಎಂದು ಐಎಂಎ ಉತ್ತರಾಖಂಡ ಘಟಕ ನೋಟಇಸ್ ನೀಡಿತ್ತು.

ಇದರ ಬೆನ್ನಲ್ಲೇ ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಐಎಂಎ, ಕೋವಿಡ್ ಲಸಿಕೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಾಬಾ ರಾಮ್ ದೇವ್ ವಿರುದ್ಧ ಕೇಸ್ ದಾಖಲಿಸಿ, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು